ಬಿ-ಖಾತಾ ಯೋಜನೆಯ ಲಾಭ ಪಡೆಯಿರಿ: ಶಾಸಕ ರಾಜು ಕಾಗೆ
Take advantage of the B-Khata scheme: MLA Raju Kage
ಬಿ-ಖಾತಾ ಯೋಜನೆಯ ಲಾಭ ಪಡೆಯಿರಿ: ಶಾಸಕ ರಾಜು ಕಾಗೆ
ಕಾಗವಾಡ 27: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಬಿ ಖಾತೆಯ ಲಾಭವನ್ನು ಎಲ್ಲರೂ ಪಡೆದುಕೊಂಡು, ಸರ್ಕಾರ ಯೋಜನೆಯ ಲಾಭ ಪಡೆಯಬೇಕೆಂದು ಶಾಸಕ ರಾಜು ಕಾಗೆ ಹೇಳಿದರು. ಅವರು ಬುಧವಾರ ದಿ. 25 ರಂದು ತಾಲೂಕಿನ ಶೇಡಬಾಳ ಪಟ್ಟಣ ಪಂಚಾಯತ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಉಳಿತಾಯ ಬಜೆಟ್ ಮಂಡನೆಯ ಸಭೆಯಲ್ಲಿ ಭಾಗವಹಿಸಿ, ಮಾತನಾಡುತ್ತಿದ್ದರು. ರಾಜ್ಯ ಸರ್ಕಾರ ತಮ್ಮ ತೋಟದ ಹಾಗೂ ಪಟ್ಟಣದಲ್ಲಿ ಇರುವ ಆಸ್ತಿ ನೋಂದಣಿಯಾಗದೇ ಇರುವ ಆಸ್ತಿಗಳನ್ನು ಬಿ ಖಾತೆ ಮಾಡಿ, ಕೊಳ್ಳುವ ಅವಕಾಶ ನೀಡಿದ್ದು, ಈ ಯೋಜನೆ ಬರುವ ಮೇ ತಿಂಗಳ ವರಗೆ ಜಾರಿಯಲ್ಲಿದೆ. ಪಟ್ಟಣದ ನಾಗರೀಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಬಜೆಟ್ ಸಭೆಯಲ್ಲಿ ಪ.ಪಂ. ಅಧ್ಯಕ್ಷ ಉತ್ಕರ್ಷ ಪಾಟೀಲ ಅಧ್ಯಕ್ಷತೆಯಲ್ಲಿ ಮುಖ್ಯಾಧಿಕಾರಿ ಸುರೇಶ ಪತ್ತಾರ ಉಳಿತಾಯ ಬಜೆಟ್ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿ, ರಾಜ್ಯ ಸರ್ಕಾರ ಹಾಗೂ ಇತರೆ ಯೋಜನೆಯಿಂದ 8.24 ಕೋಟಿ ಸಂಗ್ರಹವಾಗಿದ್ದು, ಇದರಲ್ಲಿ 8.22 ಕೋಟಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಂಚಿಕೆ ಮಾಡಲಾಗಿದೆ. 1.79 ಲಕ್ಷ ಉಳಿತಾಯ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದರು. ಉಪಾಧ್ಯಕ್ಷ ದೀಪಾ ಹೊನಕಾಂಬಳೆ, ಸದಸ್ಯರಾದ ರಶಿದಾ ಮೇಸ್ತ್ರಿ, ಸುಲಭಾ ಪಾಟೀಲ, ಸ್ವಾತಿ ಜಗತಾಪ, ಅನೀಲ ಮಾಲಗಾಂವೆ, ಮಹಾದವಲ ಯಾದವಾಡೆ, ರಾಮು ನರಸಾಯಿ, ಬಾಬು ಐನಾಪೂರ, ಶೈಲಾ ಢಾಲೆ, ಶೃತಿ ಮಾಳಗೆ, ರೇಣುಕಾ ಹೊನಕಾಂಬಳೆ, ಅಣ್ಣಪ್ಪಾ ಮಾಕಣ್ಣನವರ, ರಮೇಶ ರತ್ನಪ್ಪಗೋಳ, ಜಿ.ಬಿ. ಹೀರೆಮಠ, ಸುಧೀರ ಮಾಳಪ್ಪಗೋಳ, ಶೇಖರ ಜಾಧವ, ಲೋಕೇಶ ನಡೋಣಿ, ಜೋತಿ ಪಾಟೀಲ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 