ತಲ್ಲೂರ ಗ್ರಾಮಸ್ಥರಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಗೌರವ ಸನ್ಮಾನ
Tallur villagers pay tribute to MLA Vishwas Vaidya
ತಲ್ಲೂರ ಗ್ರಾಮಸ್ಥರಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಗೌರವ ಸನ್ಮಾನ
ಯರಗಟ್ಟಿ, 04; ದೇವಸ್ಥಾನದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳದರು.ಸಮೀಪದ ತಲ್ಲೂರ ಗ್ರಾಮದ ಗ್ರಾಮದೇವಿ ದೇವಸ್ಥಾನ ಕಟ್ಟಡ ಜೀರ್ಣೋದ್ದಾರಕ್ಕೆ 20 ಲಕ್ಷ ರೂ ಅನುದಾನ ಮಂಜುರು ಮಾಡಿದ ಹಿನ್ನಲೆ ಇತ್ತೀಚಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದೇವಸ್ಥಾನಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯನ್ನು ಸಿಸಿ ರಸ್ತೆ ಮಾಡುವದಾಗಿ ಭರವಸೆ ನೀಡಿದರು.ವೇದ ಮುರ್ತಿ ಪ್ರಸನ್ನ ಶಾಸ್ತ್ರಿ ಮಾತನಾಡಿ, ಸಮಾಜ ಮತ್ತು ದೇಶದ ಏಳಿಗೆಗೆ ದುಡಿಯುತ್ತಿರುವ ಮಠಮಾನ್ಯಗಳ ಅಭಿವೃದ್ದಿಗೆ ಭಕ್ತರ ಸಹಕಾರ ಬೇಕು ಎಂದರು.ಮುಖಂಡ ಶಂಕರಗೌಡ ಪಾಟೀಲ, ಈರಣ್ಣ ಹುದ್ದಾರ, ಬಸಪ್ಪ ರೊಕ್ಕದಕಟ್ಟಿ, ಜಗದೀಶ ಹೊಸಮಠ, ಪಿಡಿಒ ವಿಜಯಕುಮಾರ, ಎಚ್.ಕೆ.ಚೌರಡ್ಡಿ, ಅಂಗಡಿ, ಶಶಿದರ ತಳವಾರ, ನೀಲಕಂಠ ಸರದಾರ, ಮಹಾಂತೇಶ ಉಪ್ಪಿನ, ರಾಜು ಪೂಜೇರ, ಸುಭಾನಿ ಕುದರಿ, ಬಸನಾಯ್ಕ ಚಿಕಾಕಿ, ಪ್ರಕಾಶ ಮುರಗೋಡ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 