ತಾಲೂಕಾ ಮಟ್ಟದ ಕಾಲೇಜ್ ವಿದ್ಯಾರ್ಥಿಗಳ ಸ್ಪರ್ಧೆ
Taluka level college student competition
ನೇಸರಗಿ 17: 2025 -26 ನೇ ಸಾಲಿನ ಬೈಲಹೊಂಗಲ ಹಾಗೂ ಚ.ಕಿತ್ತೂರು ತಾಲೂಕ ಮಟ್ಟದ ಪದವಿ ಪೂರ್ವ ಕಾಲೇಜುಗಳ ಸಂಸ್ಕೃತಿಕ ಚಟುವಟಿಗಳ ಸ್ಪರ್ಧೆಗಳು, ಸರಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಗ್ರಾಮದ ಪಿಯು ಕಾಲೇಜು ಆವರಣದಲ್ಲಿ ಜರುಗಿದವು. ಆರಂಭದಲ್ಲಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನವರಿಗೆ ಶ್ರದಾಂಜಲಿ ಸಲ್ಲಿಸುವುದರ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಸಮಾರಂಭದಲ್ಲಿ ವಿವಿಧ ಕಾಲೇಜು ಗಳಿಂದ ಆಗಮಿಸಿದ ಅನೇಕ ಸ್ಪರ್ಧಾಳುಗಳು ಭಾಗವಹಿಸಿದ್ದರು ಹಾಗೂ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ವೇದಿಕೆಯ ಮೇಲೆ ಪ್ರಾಂಶುಪಾಲರಾದ ಎಸ್ ವ್ಹಿ ದೊಡಮನಿ, ಕಾಲೇಜು ಸುಧಾರಣಾ ಸಮಿತಿ ಉಪಾಧ್ಯಕ್ಷರಾದ, ಶ ಬಸವರಾಜ ಚಿಕ್ಕನಗೌಡ್ರ, ಯುವ ಧುರಿಣರಾದ ಸಚಿನ್ ಪಾಟೀಲ್, ಹಿರಿಯ ಉಪನ್ಯಾಸಕರಾದ ಪುರಾಣಿಕಮಠ, ಎಸ್ . ಆರ್. ಕಲಹಾಳ,ಶಿಕ್ಷಕರಾದ ಸಂತೋಷ ಪಾಟೀಲ ಹಾಗೂ ಅಃಅ ಯ ಸದಸ್ಯರು, ಉಪನ್ಯಾಸಕರು, ಉಪಸ್ಥಿತರಿದ್ದರು. ಗಣ್ಯಮಾನ್ಯರು, ಅಥಿತಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಸಿ.ಬಿ. ರೊಟ್ಟಿ ನಿರೂಪಿಸಿದರೆ, ಕನ್ನಡ ಉಪನ್ಯಾಸಕಾರದ ಡಾ. ಎನ್. ಎಸ್. ವಾಲಿಕಾರ ಎಲ್ಲರನ್ನು ವಂದಿಸಿದರು. ಸಂಜೆ ಸಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 