ಟಾಟಾ ಎಸ್. ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ
Tata S. A terrible road accident between bikes
ಟಾಟಾ ಎಸ್. ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ
ಜಮಖಂಡಿ : 1 : ತಾಲ್ಲೂಕಿನ ಆಲಗೂರ ಗ್ರಾಮದ ಬಳಿ ಕಾರು. ಟಾಟಾ ಎಸ್. ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿದ್ದು.ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ತಾಲ್ಲೂಕಿನ ಬಿ.ಕೆ. ಜಂಬಗಿ ಗ್ರಾಮದ ಆನಂದ ಬಾಡಗಿ (22) ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (42) ವಿಜಯಪೂರ ಜಿಲ್ಲೆಯ ಬೆನಕನಹಳ್ಳಿಯ ಮಹಾಂತೇಶ ಹೊನ್ನಾಕಟ್ಟೆ (33) ಹೀಗೆಟಾಟಾ ಎಸ್.ಕಾರು. ಬೈಕ್ ನಲ್ಲಿ ಇದ್ದ ತಲಾ ಒಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.ಜಮಖಂಡಿಯಿಂದ ವಿಜಯಪೂರಕ್ಕೆ ಹೊರಟ್ಟಿದ ಟಾಟಾ ಎಸ್. ವಿಜಯಪೂರದಿಂದ ಜಮಖಂಡಿ ಕಡೆಗೆ ಬರುತ್ತಿರುವ ಕಾರು ಡಿಕ್ಕಿ ಹೊಡೆದಿದ್ದು. ಟಾಟಾ ಎಸ್ ಹಿಂಬದಿಯಲ್ಲಿ ಇದ್ದ ಬೈಕ್ ಗಳು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಘಟನಾ ಸ್ಥಳಕ್ಕೆ ಜಿಲ್ಲಾ ಎಸ್.ಪಿ.ಅಮರನಾಥ ರೆಡ್ಡಿ. ಡಿ.ಎಸ್.ಪಿ. ಶಾಂತವೀರ ಈ. ಸಿಪಿಐ ಮಲ್ಲಪ್ಪ ಮಡ್ಡಿ. ಗ್ರಾಮೀಣ ಠಾಣೆಯ ಪಿಎಸ್ ಐ ಗಂಗಾಧರ ಪೂಜಾರಿ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದ್ದಾರೆ.ಪೋಟೋ : ಜಮಖಂಡಿ ತಾಲ್ಲೂಕಿನ ಆಲಗೂರ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸ್ಥಳಕ್ಕೆ ಜಿಲ್ಲಾ ಎಸ್ ಪಿ. ಭೇಟಿ ನೀಡಿರುವುದು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 