ಎಲೆಕ್ಟ್ರಿಕ್ ವಾಹನ, ಚಾರ್ಜರ್ಗಳ ಮೇಲಿನ ತೆರಿಗೆ ಕಡಿತ: ಆಗಸ್ಟ್ 1ರಿಂದ ಅಗ್ಗ
ನವದೆಹಲಿ 27: ಎಲೆಕ್ಟ್ರಿಕ್ ವಾಹನಗಳು ಮತ್ತು ಚಾರ್ಜರ್ ಗಳ ಮೇಲಿನ ತೆರಿಗೆಯನ್ನು ಆಗಸ್ಟ್ 1ರಿಂದ ಕಡಿತಗೊಳಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ಶನಿವಾರ ನಿರ್ಧರಿಸಿದೆ.
ಕೇಂದ್ರ ಹಣಕಾಸು ಮತ್ತು ಕಾಪರ್ೊರೇಟ್ ವ್ಯವಹಾರಗಳ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಜಿಎಸ್ಟಿ ಮಂಡಳಿಯ 36ನೇ ಸಭೆಯಲ್ಲಿ ಈ ನಿಧರ್ಾರ ಕೈಗೊಳ್ಳಲಾಗಿದೆ.
ಎಲ್ಲಾ ಎಲೆಕ್ಟ್ರಿಕ್ ವಾಹನಗಳ ಜಿಎಸ್ ಟಿ ದರವನ್ನು ಶೇಕಡಾ 12ರಿಂದ 5ಕ್ಕೆ ಇಳಿಸಲು ಮಂಡಳಿ ಶಿಫಾರಸು ಮಾಡಿದೆ.
ಎಲೆಕ್ಟ್ರಿಕ್ ವಾಹನಗಳ ಚಾರ್ಜರ್ ಮತ್ತು ಚಾಜರ್ಿಂಗ್ ಕೇಂದ್ರಗಳ ಜಿಎಸ್ಟಿ ದರವನ್ನು ಶೇಕಡಾ 18ರಿಂದ ಶೇಕಡಾ 5ಕ್ಕೆ ಇಳಿಸಲು ನಿರ್ಧರಿಸಲಾಗಿದೆ.
ಸ್ಥಳೀಯ ಪ್ರಾಧಿಕಾರಗಳು ಬಾಡಿಗೆಗೆ ಪಡೆಯುವ ಎಲೆಕ್ಟ್ರಿಕ್ ಬಸ್ಗಳಿಗೆ (12 ಕ್ಕೂ ಹೆಚ್ಚು ಪ್ರಯಾಣಿಕರ ಸಾಗಿಸುವ ಸಾಮಥ್ರ್ಯ) ಜಿಎಸ್ಟಿಯಿಂದ ವಿನಾಯಿತಿ ನೀಡಲಾಗಿದೆ.
ಈ ಬದಲಾವಣೆ 2019, ಆಗಸ್ಟ್ 1ರಿಂದ ಜಾರಿಗೆ ಬರಲಿದೆ. ತೆರಿಗೆ ಪಾವತಿಸುವ ಆಯ್ಕೆಯನ್ನು ಪಡೆಯಲು ಜಿಎಸ್ಪಿ ಸಿಎಂಪಿ -02 ಅಜರ್ಿಯಲ್ಲಿ ಮಾಹಿತಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 31ರಿಂದ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಕೇಂದ್ರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್, ಕಂದಾಯ ಕಾರ್ಯದಶರ್ಿ ಅಜಯ್ ಭೂಷಣ್ ಪಾಂಡೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
ಏಪ್ರಿಲ್ 2019 ರಿಂದ ಜೂನ್ 2019 ರವರೆಗೆ (ಸಂಯೋಜನೆ ಯೋಜನೆಯಡಿ ತೆರಿಗೆ ಪಾವತಿದಾರರಿಂದ) ಫಾರ್ಮ ಜಿಎಸ್ಟಿ ಸಿಎಂಪಿ -08ರಲ್ಲಿ ಸ್ವಯಂ ಮೌಲ್ಯಮಾಪನ ತೆರಿಗೆಯ ವಿವರಗಳನ್ನು ಒಳಗೊಂಡಿರುವ ಹೇಳಿಕೆಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 31 ರಿಂದ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 