ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ಶಿಕ್ಷಕ ಸಂತೋಷ ಬಂಡೆ ಆಯ್ಕೆ
Teacher Santhosh Bande selected for National Gyansiri Award
ಇಂಡಿ 24: ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಸ್ ಹಾಗೂ ಕರ್ನಾಟಕ ನಾಡ ರಕ್ಷಣಾ ವೇದಿಕೆ ವಿಜಯಪುರ ವತಿಯಿಂದ ವಿಶೇಷ ಸಾಧಕರಿಗೆ ಕೊಡಮಾಡುವ ರಾಷ್ಟ್ರೀಯ ಜ್ಞಾನಸಿರಿ ಪ್ರಶಸ್ತಿಗೆ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸುರೇಶ ಜತ್ತಿ ತಿಳಿಸಿದ್ದಾರೆ. ಇದೇ 28 ರ ಇಳಿಹೊತ್ತು 4.30 ಕ್ಕೆ ವಿಜಯಪುರ ನಗರದಲ್ಲಿ ಜರುಗುವ ’ಜ್ಞಾನಸಿರಿ ಉತ್ಸವ-2026’ ಸಮಾರಂಭದಲ್ಲಿ ಮನುಗೂಳಿಯ ಸಂಗನಬಸವ ಶಿವಾಚಾರ್ಯರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲೀಕಾರ ಸೇರಿದಂತೆ ಅನೇಕ ಗಣ್ಯರು ಶಿಕ್ಷಕ ಸಂತೋಷ ಬಂಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 