ಕಣವಿ ತಿಮ್ಮಾಪುರದಲ್ಲಿ ತೆಲುಗು ಶಾಸನ ಪತ್ತೆ
Telugu inscription found at Kanavi Thimmapura
ಕಣವಿ ತಿಮ್ಮಾಪುರದಲ್ಲಿ ತೆಲುಗು ಶಾಸನ ಪತ್ತೆ
ಕಂಪ್ಲಿ 13: ಕಂಪ್ಲಿ ತಾಲ್ಲುಕಿನ ನಂ.10 ಮುದ್ದಾಪುರ ಗ್ರಾ.ಪಂ.ವ್ಯಾಪ್ತಿಯ ಕಣವಿ ತಿಮ್ಮಾಪುರ ಗ್ರಾಮದಲ್ಲಿ ಶ್ರೀಕೃಷ್ಣ ದೇವರಾಯನ ಕಾಲದ ಶಿಲಾ ಶಾಸನವನ್ನು ಸಹಾಯಕ ಪ್ರಾಧ್ಯಾಪಕ ತಳವಾರ ನರಸಿಂಹ ಪತ್ತೆ ಹಚ್ಚಿದ್ದಾರೆ. ಇದು ವಿಜಯನಗರ ಕಾಲದ ಶಾಸನವಾಗಿದ್ದು, ಇದರ ಕಾಲ ಸಾಮಾನ್ಯ ಶಕ 1516 ಎಂದು ತಳವಾರ ನರಸಿಂಹ ಅವರು ಗುರುತಿಸಿದ್ದಾರೆ.
ಇದು ಶ್ರೀಕೃಷ್ಣ ದೇವರಾಯನ ಕಾಲದ ಶಾಸನವಾಗಿದೆ. ಶಾಸನವನ್ನು ಕನ್ನಡ ಲಿಪಿಯಲ್ಲಿ ಬರೆಯಲಾಗಿದೆ. ಆದರೆ ಶಾಸನದ ಭಾಷೆ ತೆಲುಗು ಆಗಿದೆ. ಮೇಲ್ಭಾಗದಲ್ಲಿ 18 ಸಾಲುಗಳು ಹಾಗೂ ಎಡ ಭಾಗದ ಅಂಚಿನಲ್ಲಿ ಎರಡು ಸಾಲುಗಳಿಂದ ಕೂಡಿದೆ. ಮೇಲ್ನೋಟಕ್ಕೆ ಈ ಶಾಸನವು ದಾನ ಶಾಸನ ಎಂಬಂತೆ ಗೋಚರಿಸುತ್ತಿದೆ ಎಂದು ತಿಳಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪರಶಿವಮೂರ್ತಿಯವರು ಈ ಶಾಸನ ತೆಲುಗು ಭಾಷೆಯಲ್ಲಿದೆ. ಹೆಚ್ಚಿನ ಅಧ್ಯಯನ ಮಾಡಲು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ.
ಮೈಸೂರಿನ ಕೇಂದ್ರ ಪುರಾತತ್ವ ಇಲಾಖೆಯ ಶಾಸನ ತಜ್ಞ ಡಾ.ನಾಗರಾಜಪ್ಪ ಅವರು ಶಾಸನದ ಪಡಿಯಚ್ಚು ತೆಗೆದಿದ್ದು, ಹೆಚ್ಚಿನ ಅಧ್ಯಯನ ಮಾಡುತ್ತಿದ್ದಾರೆ. ತಳವಾರ ನರಸಿಂಹ ಅವರು ಈ ಶಾಸನದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನ ಮಾಡುತ್ತಿದ್ದೇವೆಂದು ಪತ್ರಿಕೆಗೆ ತಿಳಿಸಿದರು. ಈ ಶಾಸನ ಪತ್ತೆ ಹಚ್ಚುವಲ್ಲಿ ಯಲ್ಲಪ್ಪ, ನಾಗರಾಜ್, ಮಾರ್ಪ ಮತ್ತು ಗ್ರಾಮಸ್ಥರ ಸಹಕಾರನವನ್ನು ಸ್ಮರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 