ಮಠ, ಮಂದಿರಗಳು ಭಾರತ ದೇಶದ ಭವ್ಯ ಪರಂಪರೆಯ ಪ್ರತೀಕವಾಗಿವೆ : ಪ್ರಣಯ ಪಾಟೀಲ
Temples and monasteries are symbols of India's great heritage: Pranaya Patil
ಮಠ, ಮಂದಿರಗಳು ಭಾರತ ದೇಶದ ಭವ್ಯ ಪರಂಪರೆಯ ಪ್ರತೀಕವಾಗಿವೆ : ಪ್ರಣಯ ಪಾಟೀಲ
ರಾಯಬಾಗ 30: ದೇಶದ ಜನರನ್ನು ಒಂದೆಡೆ ಸೇರಿಸುವ ಮಠ, ಮಂದಿರಗಳು ಭಾರತ ದೇಶದ ಭವ್ಯ ಪರಂಪರೆಯ ಪ್ರತೀಕವಾಗಿವೆ ಎಂದು ಜಿ.ಪಂ.ಮಾಜಿ ಸದಸ್ಯ, ಅಬಾಜಿ ಫೌಂಡೇಶನ್ ಅಧ್ಯಕ್ಷ ಪ್ರಣಯ ಪಾಟೀಲ ಹೇಳಿದರು.
ಬುಧವಾರ ರಾಯಬಾಗ ರೈಲ್ವೆ ಸ್ಟೇಷನದ (ಖೈರವಾಡಿ) ಲಕ್ಷ್ಮೀದೇವಿ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸಿರುವ ಮಹಾದ್ವಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧಾರ್ಮಿಕ ಶ್ರದ್ಧಾಭಕ್ತಿಗಳಿಂದ ಮನುಷ್ಯನು ಶಾಂತಿ ನೆಮ್ಮದಿ ಪಡೆಯಲು ಸಾಧ್ಯವಾಗುತ್ತದೆ. ಪ್ರತಿಯೊಂದು ಹಬ್ಬಗಳಲ್ಲಿ ಮತ್ತು ಧಾರ್ಮಿಕ ಆಚರಣೆಗಳಲ್ಲಿ ಜಾತಿ, ಮತ, ಪಂಥಗಳ ತಾರತಮ್ಯಗಳಿಲ್ಲದೇ ಎಲ್ಲ ಜನರು ಒಟ್ಟಾಗಿ ಪಾಲ್ಗೊಂಡು ಸಂಭ್ರಮಾಚರಣೆಯಲ್ಲಿ ತೊಡಗುತ್ತಾರೆ ಎಂದರು. ದೇವಸ್ಥಾನ ಅಭಿವೃದ್ಧಿಗಾಗಿ ಎಲ್ಲರೂ ಕೈಜೋಡಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮರೆಪ್ಪ ದಿಪಾಳೆ, ರಾಯಪ್ಪ ಗೊಂಡೆ, ಗುಣಪಾಲ ಬಡೋರೆ, ಸಂಜು ಬಾವಚೆ, ರಮೇಶ ಕುಂಬಾರ, ಅಣ್ಣಪ್ಪ ಹೊಸಕೋಟೆ, ಸಂತೋಷ ತೇರದಾಳೆ, ತಾನಾಜಿ ದಿಪಾಳೆ, ಮಹಾವೀರ ಶೆಟ್ಟಿ, ಸಂತೋಷ ಶೆಟ್ಟಿ, ಬೀರ್ಪ ಗೊಂಡೆ, ಹಾಲಪ್ಪ ಅಳಗವಾಡಿ, ಕುಮಾರ ಹೊಸಕೋಟೆ, ಬೀರಾ ಗೆನಾನಿ, ಅಣ್ಣಪ್ಪ ಮುಧೋಳೆ, ಕಲ್ಲಪ್ಪ ನಾಗರಾಳೆ ಹಾಗೂ ನೂರಾರು ಭಕ್ತರು ಇದ್ದರು.
ಫೋಟೊ ಶೀರ್ಷಿಕೆ: ರಾಯಬಾಗ: ರೈಲ್ವೆ ಸ್ಟೇಷನದ (ಖೈರವಾಡಿ) ಲಕ್ಷ್ಮೀದೇವಿ ದೇವಸ್ಥಾನಕ್ಕೆ ನೂತನವಾಗಿ ನಿರ್ಮಿಸಿರುವ ಮಹಾದ್ವಾರವನ್ನು ಜಿ.ಪಂ.ಮಾಜಿ ಸದಸ್ಯ ಪ್ರಣಯ ಪಾಟೀಲ ಉದ್ಘಾಟಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 