ನೆರೆ ಸಂತ್ರಸ್ತ ಕುಟುಂಬಗಳಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಜಿಲ್ಲಾಧಿಕಾರಿಗಳಿಂದ ಪರೀಶೀಲನೆ
ಗದಗ 20: ಜಿಲ್ಲೆಯಲ್ಲಿ ಮಲಪ್ರಭಾ ಹಾಗೂ ಬೆಣ್ಣಿಹಳ್ಳ ಪ್ರವಾಹದಿಂದಾಗಿ ನರಗುಂದ ಹಾಗೂ ರೋಣ ತಾಲೂಕಿನ ಗ್ರಾಮಗಳು ಜಲಾವೃತದಿಂದಾಗಿ ಜನ ಸಂಕಷ್ಟಕ್ಕಿಡಾಗಿದ್ದಾರೆ. ಅವರಿಗೆ ಜಿಲ್ಲಾಡಳಿತ ಪುನರ್ವಸತಿ ಕಾರ್ಯ ಪೂರ್ಣಗೊಳಿಸಿ ತಾತ್ಕಾಲಿಕ ವಸತಿಗಾಗಿ ಶೆಡ್ಗಳನ್ನು ನಿರ್ಮಿಸಿರುತ್ತಾರೆ. ಕೊಣ್ಣೂರಿನ ಸಂತ್ರಸ್ಥ ಅನೇಕ ಕುಟುಂಬಗಳಿಗೆ ತಾತ್ಕಾಲಿಕ ಆಶ್ರಯ ಒದಗಿಸಲು ಜಿಲ್ಲಾ ನಿಮರ್ಿತಿ ಕೇಂದ್ರದಿಂದ ಕೊಣ್ಣೂರಿನ ಎಪಿಎಂಸಿ ಯಲ್ಲಿ ತಾತ್ಕಾಲಿಕ ಶೆಡ್ಗಳನ್ನು ನಿಮರ್ಿಸಲಾಗುತ್ತಿದೆ. ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ಸ್ಥಳಕ್ಕೆ ಭೇಟಿ ನೀಡಿದ್ದು ಶೆಡ್ ನಿಮರ್ಾಣ ಕಾರ್ಯವನ್ನು ತೀವ್ರಗತಿಯಲ್ಲಿ ಪೂರೈಸಲು ಸಂತ್ರಸ್ಥರಿಗೆ ಅಗತ್ಯದ ತಾತ್ಕಾಲಿಕ ಮೂಲಭೂತ ಸೌಲಭ್ಯ ಕಲ್ಪಿಸಲು ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸದಸ್ಯ ರಾಜುಗೌಡ ಕೆಂಚನಗೌಡ್ರು, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ನಿಮರ್ಿತಿ ಕೇಂದ್ರದ ವ್ಯವಸ್ಥಾಪಕ ಗಂಗಾಧರ ಶಿರೋಳ, ತಹಶೀಲ್ದಾರ ಕೋರಿಶೆಟ್ಟರ್, ಕೊಣ್ಣುರಿನ ಜನಪ್ರತಿನಿಧಿಗಳು, ಕಂದಾಯ ಹಾಗೂ ಗ್ರಾ.ಪಂ ಅಧಿಕಾರಿ ಸಿಬ್ಬಂದಿಗಳು ಇದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 