ಕೃಷಿ ಸೇರಿದಂತೆ ನಾನಾ ಕ್ಷೇತ್ರಗಳ ಉತ್ತೇಜನಕ್ಕೆ ಹತ್ತು, ಹಲವು ಕ್ರಮ ಕೈಗೊಂಡಿದ್ದಾರೆ : ಶ್ರೀನಿವಾಸ ಮಾನೆ
Ten, many steps have been taken to promote various sectors including agriculture: Srinivas Mane
ಕೃಷಿ ಸೇರಿದಂತೆ ನಾನಾ ಕ್ಷೇತ್ರಗಳ ಉತ್ತೇಜನಕ್ಕೆ ಹತ್ತು, ಹಲವು ಕ್ರಮ ಕೈಗೊಂಡಿದ್ದಾರೆ : ಶ್ರೀನಿವಾಸ ಮಾನೆ
ಹಾನಗಲ್ : ಕೇಂದ್ರ ಸರ್ಕಾರದ ಅಸಹಕಾರ, ಆರ್ಥಿಕ ಸವಾಲುಗಳ ಮಧ್ಯೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲಿತ ಹಾಗೂ ವಾಸ್ತವತೆಯಿಂದ ಕೂಡಿದ ನಾಳೆಗಳ ಬಗ್ಗೆ ಭರವಸೆ ಮೂಡಿಸುವಂಥ ಆಶಾದಾಯಕ ಬಜೆಟ್ ಮಂಡಿಸಿದ್ದು, ಶಿಕ್ಷಣ, ಮಹಿಳಾ ಸಬಲೀಕರಣ, ಕೃಷಿ ಸೇರಿದಂತೆ ನಾನಾ ಕ್ಷೇತ್ರಗಳ ಉತ್ತೇಜನಕ್ಕೆ ಹತ್ತು, ಹಲವು ಕ್ರಮ ಕೈಗೊಂಡಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರತಿಕ್ರಿಯೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಒದಗಿಸಿ, ಮೂಲಸೌಕರ್ಯಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ರೂ. ನೀಡಿದ್ದಾರೆ. ಸುಸ್ಥಿರ ಮತ್ತು ಲಾಭದಾಯಕ ಕೃಷಿಗೆ ನಾನಾ ಕ್ರಮ ಕೈಗೊಂಡಿದ್ದಾರೆ. ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಗೆ ಮುನ್ನುಡಿ ಬರೆದಿದ್ದು, ಹೊಸದಾಗಿ 500 ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ, ಶಾಲೆಗಳ ಉನ್ನತೀಕರಣ ಬಗ್ಗೆ ಹೇಳಿದ್ದಾರೆ. ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಬಿಸಿಯೂಟ ಸಿಬ್ಬಂದಿಯ ಗೌರವಧನ ಹೆಚ್ಚಿಸಿದ್ದಾರೆ. ಅಕ್ಕ ಕೋ ಆಪರೇಟಿವ್ ಸೊಸೈಟಿ, ಅಕ್ಕ ಕ್ಯಾಂಟೀನ್ ಸ್ಥಾಪನೆಯ ಘೋಷಣೆ ಮಾಡಿದ್ದಾರೆ. ಇನ್ನು ಜಿಲ್ಲೆಯ ವಿಚಾರಕ್ಕೆ ಸಂಬಂಧಿಸಿದಂತೆ ಕಾಗಿನೆಲೆಗೆ 34 ಕೋಟಿ ರೂ. ನೀಡಿದ್ದು, ರಾಣೇಬೆನ್ನೂರಿನಲ್ಲಿ ಜವಳಿ ಪಾರ್ಕ್ ಸ್ಥಾಪನೆ, ಸವಣೂರು ತಾಲೂಕಾಸ್ಪತ್ರೆಯ ನವೀಕರಣ, ಹಾವೇರಿಯಲ್ಲಿ ವಿದ್ಯುನ್ಮಾನ ಕ್ಯಾಮರಾ ಅಳವಡಿಸುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ನರೇಗಲ್, ಕೂಸನೂರು ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ಸಿಗುವ ವಿಶ್ವಾಸವಿದೆ ಎಂದು ಶಾಸಕ ಮಾನೆ ಹೇಳಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 