ಸರದಾರ ರಾಜಾ ಲಖಮಗೌಡರ 156ನೇ ಜಯಂತಿ ಉತ್ಸವ ಸಮಾರಂಭ
ಬೆಳಗಾವಿ, 30: ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ದಿ.29. ರಂದು ಸರ್.ಸಿ.ವ್ಹಿ. ರಾಮನ್ ಸಭಾಂಗಣದಲ್ಲಿ "ಸರದಾರ ರಾಜಾ ಲಖಮಗೌಡರ 156ನೇ ಜಯಂತಿ ಉತ್ಸವ ಸಮಾರಂಭವು ಜರುಗಿತು.
ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಲಿಂಗರಾಜ ಮಹಾವಿದ್ಯಾಲಯದ ಇಂಗ್ಲೀಷ ವಿಭಾಗದ ವಿಶ್ರಾಂತ ಪ್ರಾಧ್ಯಾಪಕಿಯಾದ ಡಾ.ಗುರುದೇವಿ ಹುಲೆಪ್ಪನವರಮಠ ಅವರು ಆಗಮಿಸಿ ಮಾತನಾಡುತ್ತಾ, ರಾಜಾ ಲಖಮಗೌಡರು ಮಾದರಿ ವ್ಯಕ್ತಿತ್ವವನ್ನು ಹೊಂದಿದ್ದರು. ಅರ್ಥಪೂರ್ಣವಾದ ಬದುಕನ್ನು ಸಾಗಿಸಿದವರು. ಸದಿಚ್ಛೆಯಂತೆ ನುಡಿಯುತ್ತಿದ್ದರು. ಸದಿಚ್ಛೆಯಂತೆ ಸನ್ಮಾರ್ಗದಲ್ಲಿ ನಡೆದವರು. ಸಮಾಜದ ಬಗ್ಗೆ ಚಿಂತನೆ ಮಾಡಿ, ಮನುಕುಲದ ಒಳಿತಿಗಾಗಿ ಶ್ರಮಿಸಿದರು. ಕೊಡುಗೈ ದಾನಿಯಾಗಿ ಸಮಾಜದ ವಿವಿಧ ಕ್ಷೇತ್ರಗಳಿಗೆ ಪ್ರತಿಫಲಾಪೇಕ್ಷೆಯಿಲ್ಲದೆ ದಾನಮಾಡಿದರು. ರಾಜಾ ಲಖಮಗೌಡರು ದಾನ ಮಾಡಿದ ಸತ್ಕಾರ್ಯವು ಇಂದಿನ ಯುವಕರಿಗೆ ಆದರ್ಶಪ್ರಾಯವಾಗಿದೆ. ರಾಜಾ ಲಖಮಗೌಡರು ಜೀವನದಲ್ಲಿ ಅಳವಡಿಸಿಕೊಂಡ ಮೌಲಿಕ ಗುಣಗಳನ್ನು ಮಾದರಿಯಾಗಿಟ್ಟುಕೊಂಡು ದಾನ-ಧರ್ಮದಂತಹ ಪುಣ್ಯ ಕಾರ್ಯಗಳನ್ನು ಮಾಡಬೇಕೆಂದು ವಿದ್ಯಾಥರ್ಿಗಳಿಗೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರಾಜಾ ಲಖಮಗೌಡ ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಸ್ಥಾನಿಕ ಆಡಳಿತ ಮಂಡಳಿಯ ಕಾಯರ್ಾಧ್ಯಕ್ಷರಾದ ಎಲ್.ವ್ಹಿ. ದೇಸಾಯಿ ಅವರು ಮಾತನಾಡುತ್ತಾ, ವಿದ್ಯಾಥರ್ಿಗಳು ರಾಜಾ ಲಖಮಗೌಡರ ಜೀವನ ಮೌಲ್ಯಗಳನ್ನು ತಿಳಿದುಕೊಂಡು ಸನ್ಮಾಗರ್ಿಗಳಾಗಿ ಜೀವನ ನಡೆಸಬೇಕು. ರಾಜಾ ಲಖಮಗೌಡರ ಆದರ್ಶಗುಣಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕೆಂದು ವಿದ್ಯಾಥರ್ಿಗಳಿಗೆ ಹಿತವಚನ ನುಡಿದರು. ಪ್ರಾರಂಭದಲ್ಲಿ ಪದವಿ ಪ್ರಾಚಾರ್ಯರಾದ ಡಾ.ವ್ಹಿ.ಡಿ. ಯಳಮಲಿ ಅವರು ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾರಂಭದ ವೇದಿಕೆಯ ಮೇಲೆ ರಾಜಾ ಲಖಮಗೌಡ ಪದವಿ-ಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್.ಜಿ. ನಂಜಪ್ಪನವರ ಅವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪ್ರೊ. ಎಸ್.ಬಿ. ತಾರದಾಳೆ ಸಂಪಾದಿಸಿದ "ಸಾಹಿತ್ಯ ಸಂಭ್ರಮ"ಎಂಬ ಪುಸ್ತಕ ಲೋಕಾರ್ಪಣೆ ಮಾಡಲಾಯಿತು.
ಕುಮಾರಿ. ವಿಜಯಲಕ್ಷ್ಮೀ ಹಾಗೂ ಸಂಗಡಿಗರು ಪ್ರಾರ್ಥನಾಗೀತೆ ಹಾಡಿದರು. ಪ್ರೊ.(ಶ್ರೀಮತಿ.) ಶ್ಯಾಮಲಾ ಮುನ್ನೊಳಿ ಅವರು ವಂದಿಸಿದರು. ಪ್ರೊ. ಎಸ್.ಬಿ. ಬನ್ನಿಮಟ್ಟಿ ಕಾಯರ್ಾಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 