ಬಸವೇಶ್ವರ ಜಾತ್ರೆ ರದ್ದು ಪಿಎಸ್ಐ ಶಿರಗುಪ್ಪಿ ಅವರ ಸಮ್ಮುಖದಲ್ಲಿ ಸಭೆ
ಲೋಕದರ್ಶನ ವರದಿ
ಇಂಡಿ 25: ತಾಲೂಕಿನ ಶಿರಶ್ಯಾಡ ಗ್ರಾಮದ ಗ್ರಾಮದೇವರಾದ ಬಸವೇಶ್ವರ ಜಾತ್ರೆಯನ್ನು ರದ್ದುಪಡಿಸುವ ಕುರಿತು ಗ್ರಾಮೀಣ ಪಿಎಸ್ಐ ಎಸ.ಎಮ್. ಶಿರಗುಪ್ಪಿ ಅವರ ಸಮ್ಮುಖದಲ್ಲಿ ಸಭೆ ನಡೆಸಲಾಯಿತು.
ಸಭೆಯನ್ನುದ್ದೇಶಿಸಿ ಪಿಎಸ್ಐ ಶಿರಗುಪ್ಪಿ ಮಾತನಾಡಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಲು ಕಡ್ಡಾಯವಾಗಿ ಸಭೆ, ಸಮಾರಂಭಗಳನ್ನು ಮದುವೆ ಸೇರಿದಂತೆ ಇನ್ನಿತರ ಎಲ್ಲ ಧಾಮರ್ಿಕ ಸಮಾರಂಭಗಳನ್ನು ಮಾಡದಂತೆ ಸರಕಾರ ಆದೇಶಿಸಿದ್ದು ಗ್ರಾಮಸ್ಥರು ಸರಕಾರದ ಆದೇಶ ಪಾಲಿಸಲೇಬೇಕು ಎಂದು ತಿಳಿಸಿದರು.
ಇದಕ್ಕೆ ಗ್ರಾಮಸ್ಥರೆಲ್ಲರೂ ಒಪ್ಪಿಗೆ ಸೂಚಿಸಿ ಈ ಬಾರಿ ಜಾತ್ರೆ ರದ್ದುಪಡಿಸುತ್ತೇವೆ ಎಂದು ಒಪ್ಪಿಕೊಂಡರು. ಪ್ರತೀ ವರ್ಷ ಬಸವ ಜಯಂತಿಯ ದಿನದಂದು ಶಿರಶ್ಯಾಡ ಗ್ರಾಮದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವ ಅಥಿ ವಿಜೃಂಭಣೆಯಿಂದ ನಡೆಯುತ್ತಿತ್ತು. ಕೊರೊನಾ ಮಾಹಾಮಾರಿಯಿಂದ ಜಾತ್ರೆಯು ರದ್ದಾಗಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ ಶಂಕರಗೌಡ ಪಾಟೀಲ, ಅಣ್ಣಪ್ಪ ಮಾಸ್ತರ್ ಬಿರಾದಾರ, ಬಾಳು ಮುಳಜಿ, ಬಿ.ಕೆ.ಬಿರಾದಾರ, ದಾದು ಕೋಣಶಿರಸಗಿ, ಗ್ರಾಮ ಪಂಚಾಯತ್ ಸಿಬ್ಬಂದಿ ಶಿವಯ್ಯ ಹಿರೇಮಠ, ಮಹಾದೇವ ತಡ್ಲಗಿ, ಪೊಲೀಸ್ ಸಿಬ್ಬಂದಿಗಳಾದ ಯಶ್ವಂತ ನಾಯಿಕ್ ಮತ್ತು ಶ್ರೀಧರ ಬಗಲಿ ಇದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 