ರಾಷ್ಟ್ರದ ಏಕತೆ ಸಮಗ್ರತೆ ವ್ಯಕ್ತಿ ಗೌರವ ಸಂವಿಧಾನ ಕಾಪಾಡುತ್ತಿದೆ: ಡಾ.ಸೌಧಾಗರ
The Constitution protects the unity, integrity and dignity of the nation: Dr. Soudhagar
ಬ್ಯಾಡಗಿ 28: ವೈವಿಧ್ಯಮಯವಾದ ದೇಶದಲ್ಲಿ ಶಾಂತಿ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಘನತೆಯಿಂದ ಬದುಕಲು ಅನುವು ಮಾಡಿಕೊಟ್ಟಿರುವ ಸಂವಿಧಾನವನ್ನು ಅಂಬೇಡ್ಕರ್ರವರು ನಮಗೆ ನೀಡಿದ್ದಾರೆ. ನಾವೆಲ್ಲರೂ ಒಂದೇ ಎಂದು ಸಾರಿದ್ದಾರೆ. ಎಲ್ಲರಿಗೂ ಒಂದೇ ಕಾನೂನು ನೀಡಿ ಪ್ರಪಂಚದ ಅತ್ಯಂತ ದೊಡ್ಡ ಮತ್ತು ಸಂಪೂರ್ಣವಾದ ಸಂವಿಧಾನ ನೀಡಿದ, ಇಡೀ ಜಗತ್ತೇ ನಿಬ್ಬೆರಗಾಗಿ ನೋಡಿದ ದಿನ ಇದಾಗಿದೆ ಎಂದು ಡಾ.ಸೌಧಾಗರ ಹೇಳಿದರು.
ಪಟ್ಟಣದ ಸುಭಾಷ್ ಸರ್ಕಲನ ವರ್ತಕರಿಗೆ ಹಾಗೂ ಆಟೋ ಚಾಲಕರಿಗೆ ಸಂವಿಧಾನ ಪೀಠಿಕೆ ಭೋಧನೆ ಮಾಡಿಸುವ ಮೂಲಕ ಸಂವಿಧಾನ ದಿನಾಚರಣೆ ಆಚರಿಸಿ ಮಾತನಾಡಿದರು. ರಾಷ್ಟ್ರದ ಏಕತೆ ಸಮಗ್ರತೆ ವ್ಯಕ್ತಿ ಗೌರವ ಹಾಗೂ ಸಾಮಾಜಿಕ ಶಾಂತಿಯನ್ನು ಸಂವಿಧಾನ ಕಾಪಾಡುತ್ತಿದೆ ಆರ್ಥಿಕ ರಾಜಕೀಯ ಸಾಮಾಜಿಕ ಸಮಾನತೆಯನ್ನು ಪ್ರತಿಯೊಬ್ಬರಿಗೂ ಕಲ್ಪಿಸಿದೆ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ವರ್ತಕರಾದ ರಿಯಾಜ್ ನದಾಫ, ಆಟೋ ಚಾಲಕ ಅಸ್ಲಂ ಬಾಗಲಕೋಟ, ಸುರೇಶ ಬಿರಾದಾರ, ಮೊಹಮ್ಮದ್ ಮೆಡ್ಲೇರಿ, ಕೃಷ್ಣ ದುಳಿಕೊಪ್ಪ, ರಾಜೇಸಾಬ, ಹುಸೇನ ಬೆಂಚಳ್ಳಿ, ಈರ್ಪ, ಮಹೇಶ್ ಮಾಸೂರು ಏ. ಓ ರ ಸ್ವಾಮಿ ಉಪಸ್ಥಿತರಿದ್ದರು
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 