ರಾಷ್ಟ್ರದ ಏಕತೆ ಸಮಗ್ರತೆ ವ್ಯಕ್ತಿ ಗೌರವ ಸಂವಿಧಾನ ಕಾಪಾಡುತ್ತಿದೆ: ಡಾ.ಸೌಧಾಗರ
The Constitution protects the unity, integrity and dignity of the nation: Dr. Soudhagar
ಬ್ಯಾಡಗಿ 28: ವೈವಿಧ್ಯಮಯವಾದ ದೇಶದಲ್ಲಿ ಶಾಂತಿ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಘನತೆಯಿಂದ ಬದುಕಲು ಅನುವು ಮಾಡಿಕೊಟ್ಟಿರುವ ಸಂವಿಧಾನವನ್ನು ಅಂಬೇಡ್ಕರ್ರವರು ನಮಗೆ ನೀಡಿದ್ದಾರೆ. ನಾವೆಲ್ಲರೂ ಒಂದೇ ಎಂದು ಸಾರಿದ್ದಾರೆ. ಎಲ್ಲರಿಗೂ ಒಂದೇ ಕಾನೂನು ನೀಡಿ ಪ್ರಪಂಚದ ಅತ್ಯಂತ ದೊಡ್ಡ ಮತ್ತು ಸಂಪೂರ್ಣವಾದ ಸಂವಿಧಾನ ನೀಡಿದ, ಇಡೀ ಜಗತ್ತೇ ನಿಬ್ಬೆರಗಾಗಿ ನೋಡಿದ ದಿನ ಇದಾಗಿದೆ ಎಂದು ಡಾ.ಸೌಧಾಗರ ಹೇಳಿದರು.
ಪಟ್ಟಣದ ಸುಭಾಷ್ ಸರ್ಕಲನ ವರ್ತಕರಿಗೆ ಹಾಗೂ ಆಟೋ ಚಾಲಕರಿಗೆ ಸಂವಿಧಾನ ಪೀಠಿಕೆ ಭೋಧನೆ ಮಾಡಿಸುವ ಮೂಲಕ ಸಂವಿಧಾನ ದಿನಾಚರಣೆ ಆಚರಿಸಿ ಮಾತನಾಡಿದರು. ರಾಷ್ಟ್ರದ ಏಕತೆ ಸಮಗ್ರತೆ ವ್ಯಕ್ತಿ ಗೌರವ ಹಾಗೂ ಸಾಮಾಜಿಕ ಶಾಂತಿಯನ್ನು ಸಂವಿಧಾನ ಕಾಪಾಡುತ್ತಿದೆ ಆರ್ಥಿಕ ರಾಜಕೀಯ ಸಾಮಾಜಿಕ ಸಮಾನತೆಯನ್ನು ಪ್ರತಿಯೊಬ್ಬರಿಗೂ ಕಲ್ಪಿಸಿದೆ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ವರ್ತಕರಾದ ರಿಯಾಜ್ ನದಾಫ, ಆಟೋ ಚಾಲಕ ಅಸ್ಲಂ ಬಾಗಲಕೋಟ, ಸುರೇಶ ಬಿರಾದಾರ, ಮೊಹಮ್ಮದ್ ಮೆಡ್ಲೇರಿ, ಕೃಷ್ಣ ದುಳಿಕೊಪ್ಪ, ರಾಜೇಸಾಬ, ಹುಸೇನ ಬೆಂಚಳ್ಳಿ, ಈರ್ಪ, ಮಹೇಶ್ ಮಾಸೂರು ಏ. ಓ ರ ಸ್ವಾಮಿ ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 