ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಲೋಕದರ್ಶನ ವರದಿ
ತಾಳಿಕೋಟೆ 25:ಪಟ್ಟಣದಲ್ಲಿ ಇದೇ ದಿ. 28 ಹಾಗೂ 29 ಈ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಗಳನ್ನು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರು ಬುಧವಾರರಂದು ಅವರ ಕಾಯರ್ಾಲಯದಲ್ಲಿ ಬಿಡುಗಡೆಗೊಳಿಸಿದರು.
ಈ ಸಮಯದಲ್ಲಿ ಮಾತನಾಡಿದ ಸಚಿವ ಜಿಗಜಿಣಗಿ ಅವರು ಕನ್ನಡ ನಾಡು, ನುಡಿ, ಭಾಷೆಯನ್ನು ಬೆಳೆಸಲು ಕನ್ನಡ ಸಾಹಿತ್ಯ ಪರಿಷತ್ ಸತತವಾಗಿ ಮುನ್ನಡೆಯುತ್ತಾ ಸಾಗಿ ಬಂದಿದೆ ಈ ಭಾರಿ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ನಗರಿ ತಾಳಿಕೋಟೆ ಪಟ್ಟಣದಲ್ಲಿ ಆಯೋಜಿಸಿರುವದು ಅತ್ಯಂತ ಸಂತೋಷವೆನಿಸುತ್ತಿದೆ ಸಮ್ಮೇಳನದ ಯಶಸ್ವಿಗೆ ಎಲ್ಲ ರೀತಿಯಿಂದ ಸಹಕಾಯ ಸಹಕಾರ ವನ್ನು ಕನ್ನಡ ಸಾಹಿತ್ಯ ಪರಿಷತ್ಗೆ ನೀಡುತ್ತೇನೆಂದರು.
ಈ ಸಮಯದಲ್ಲಿ ತಾಳಿಕೋಟೆ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ನ ಪದಾಧಿಕಾರಿಗಳಾದ ಮುರಿಗೆಪ್ಪ ಸರಶೆಟ್ಟಿ, ಕಾಶಿನಾಥ ಮುರಾಳ, ತಮ್ಮಣ್ಣ ದೇಶಪಾಂಡೆ, ಎಸ್.ಎನ್.ಡಿಸಲೆ, ಮೊದಲಾದವರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 