ಉದ್ಯೋಗ ಸೃಷ್ಟಿ, ಅಭಿವೃದ್ಧಿ ರಂಗಗಳಲ್ಲಿ ಮೋದಿ ಸರಕಾರ ಸಂಪೂರ್ಣ ವಿಫಲ
ಲಖನೌ 6 (ಯುಎನ್): ಉದ್ಯೋಗ ಸೃಷ್ಟಿ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಕ್ಷ (ಬಿಎಸ್ಪಿ) ವರಿಷ್ಠೆ ಮಾಯಾವತಿ, ಜನರು ಮಾತ್ರ ಸರಕಾರ ವನ್ನು ಕ್ಷಮಿಸಬೇಕಾಗಿದೆ ಎಂದು ಹೇಳಿದ್ದಾರೆ.
'ನಿರುದ್ಯೋಗ ಪ್ರಮಾಣ ದಾಖಲೆಯ ಶೇ. 6.1ಕ್ಕೆ ಏರಿದೆ ಎಂದು ಕಾಮರ್ಿಕ ಇಲಾಖೆಯೇ ಒಪ್ಪಿಕೊಂಡಿದೆ. ಇದು 45 ವರ್ಷಗಳಲ್ಲಿ ಅತ್ಯಧಿಕವಾಗಿದೆ. ಆದರೆ ಈಗ ಜನರು ಮಾತ್ರ ಸಕರ್ಾರವನ್ನು ಕ್ಷಮಿಸಬೇಕಾಗಿದೆ' ಎಂದು ಅವರು ಹೇಳಿದ್ದಾರೆ.
ಜಿಡಿಪಿ ಶೇ. 5.8 ಕ್ಕೆ ಕುಸಿದಿದೆ. ಇದು ಸಣ್ಣ ಕೈಗಾರಿಕೆಗಳು ಮತ್ತು ಕೃಷಿ ಕ್ಷೇತ್ರದ ಮೇಲೆ ಪ್ರತಿಕೂಲವಾಗಿ ಪರಿಣಾಮ ಬೀರಿದೆ. ಸಾರ್ವಜನಿಕ ಕ್ಷೇಮಾಭಿವೃದ್ಧಿ ಕಾಗದಗಳಲ್ಲಿ ಮಾತ್ರ ಉಳಿದಿದೆ. ವಾಸ್ತವ ಇದಕ್ಕೆ ವಿರುದ್ಧವಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.
ಕಳೆದ ಲೋಕಸಭಾ ಚುನಾವಣೆಗಳಲ್ಲಿ ಬದ್ಧವೈರಿ ಸಮಾಜವಾದಿ ಪಕ್ಷದೊಂದಿಗೆ ಕೈ ಜೋಡಿಸಿ ಮಹಾಘಟ್ಬಂಧನ್ನಿಂದ ಚುನಾವಣೆ ಎದುರಿಸಿದ್ದ ಬಿಎಸ್ಪಿ, ಚುನಾವಣೆಯಲ್ಲಿ ದಯನೀಯ ಸೋಲಿನ ನಂತರ ಉತ್ತರ ಪ್ರದೇಶದಲ್ಲಿ ನಡೆಯುವ ವಿಧಾನಸಭಾ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪಧರ್ಿಸುವುದಾಗಿ ಪ್ರಕಟಿಸಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 