ಅಮಾಯಕರ ಮೇಲಿನ ಹಲ್ಲೆೆ: ಕಾನೂನು ರಚನೆಗೆ ಕೇಂದ್ರ, ರಾಜ್ಯಗಳಿಗೆ 'ಸುಪ್ರೀಂ' ಸೂಚನೆ
ನವದೆಹಲಿ: ಗೋ ಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋಟರ್್ ಮಹತ್ವದ ಆದೇಶ ಹೊರಡಿಸಿದೆ.
ಈ ಬಗ್ಗೆ ಇಂದು ನಡೆದ ವಿಚಾರಣೆಯಲ್ಲಿ ಉದ್ರಿಕ್ತರಿಂದ ಅಮಾಯಕರ ಮೇಲಿನ ದಾಳಿ ಪ್ರಕರಣಗಳು ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸಕರ್ಾರಗಳ ಹೊಣೆ ಎಂದು ಹೇಳಿದೆ.
ಅಜರ್ಿಯೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋಟರ್್ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರು, ಭಯ ಮತ್ತು ಅರಾಜಕತೆ ಹೆಸರಲ್ಲಿ ಅಮಾಯಕರ ಮೇಲಿನ ದಾಳಿಯನ್ನು ಸಹಿಸಲಸಾಧ್ಯ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವೇ ಇಲ್ಲ. ಇಂತಹ ಘಟನೆಗಳ ಕುರಿತು ರಾಜ್ಯ ಸಕರ್ಾರಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯ ರಕ್ಷಣೆ ರಾಜ್ಯ ಸಕರ್ಾರಗಳ ಹೊಣೆ. ಹೀಗಾಗಿ ಯಾವುದೇ ಕಾರಣಕ್ಕೂ ಹಿಂಸೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಅಂತೆಯೇ ಸಂಸತ್ ಈ ಬಗ್ಗೆ ಹೊಸ ಕಾನೂನು ರಚಿಸುವ ಕುರಿತು ನಿರ್ಣಯ ಕೈಗೊಳ್ಳಬೇಕು ಕೇಂದ್ರಸಕರ್ಾರಕ್ಕೆ ಸುಪ್ರೀಂ ಕೋಚರ್್ ನಿದರ್ೆಶನ ನೀಡಿದೆ.
ಇನ್ನು ಇತ್ತೀಚೆಗೆ ದೇಶದ ವಿವಿಧೆಡೆ ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲೆ ದಾಳಿಗಳಾಗುತ್ತಿದ್ದು, ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಮಕ್ಕಳ ಕಳ್ಳರ ವದಂತಿ ಹಿನ್ನಲೆಯಲ್ಲಿ ದೇಶದ ವಿವಿಧೆಡೆ ಅಮಾಕರ ಮೇಲೆ ಸಾಮೂಹಿಕ ದಾಳಿಗಳಾಗುತ್ತಿದ್ದು, ಕಳೆದ ಶುಕ್ರವಾರ ಬೀದರ್ ನಲ್ಲಿ ಮಕ್ಕಳಿಗೆ ಚಾಕೊಲೇಟ್ ನೀಡುತ್ತಿದ್ದ ಹೈದರಾಬಾದ್ ಮೂಲದ ಟೆಕ್ಕಿಯನ್ನು ಸ್ಥಳೀಯರು ಮಕ್ಕಳ ಕಳ್ಳರು ಎಂದು ಶಂಕಿಸಿ ಹೊಡೆದು ಕೊಂದು
ಹಾಕಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 