ಚುನಾವಣಾ ದಿನಾಂಕ ಬದಲಿಸಬೇಕೆಂಬ ಅರ್ಜಿ ತಿರಸ್ಕರಿಸಿದ ಸುಪ್ರೀಂ
ನವದೆಹಲಿ, ಏ.4-ತಮಿಳುನಾಡು ಮತ್ತು ಪುದುಚೇರಿಯಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದಅರ್ಜಿ ಯೊಂದನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ಇದನ್ನು ನಿರಾಕರಿಸಿದೆ.
ಗುಡ್ ಫೈಡೇ ಮತ್ತು ಈಸ್ಟರ್ನ ಪವಿತ್ರ ಆಚರಣೆ ಸಂದರ್ಭದಲ್ಲೇ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಗಳು ಘೋಷಣೆಯಾಗಿವೆ. ಆದ ಕಾರಣ ಮತದಾನ ದಿನಾಂಕದ ವೇಳಾಪಟ್ಟಿಯನ್ನು ಬದಲಿಸುವಂತೆ ಕ್ರೈಸ್ತರ ಸಂಸ್ಥೆಯೊಂದು ಸುಪ್ರೀಂ ಸಲ್ಲಿಸಿತ್ತು.
ಈ ಅರ್ಜಿ ಪುರಸ್ಕರಿಸಲು ನಿರಾಕರಿಸಿ ನ್ಯಾಯಮುರ್ತಿ ಎಸ್.ಎ. ಬೊಬ್ಡೆ ನೇತೃತ್ವದ ಪೀಠವು ಪವಿತ್ರ ದಿನದಂದು ಮತ ಚಲಾಯಿಸಲು ಸಾಧ್ಯವಾಗುವುದಿಲ್ಲವೇ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು.
ನೀವು ಹೇಗೆ ಪ್ರಾರ್ಥಿಸ ಮತ್ತು ಹೇಗೆ ಮತ ಚಲಾಯಿಸಬೇಕು ಎಂಬುದನ್ನು ತಿಳಿಸಲು ನ್ಯಾಯಾಲಯ ಬಯಸುವುದಿಲ್ಲ ಎಂದು ಪೀಠವು ಸ್ಪಷ್ಟಪಡಿಸಿತು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 