ತಿರುಮಲ ದೇವಸ್ಥಾನ ಬಂದ್ ನಿಧರ್ಾರ ಹಿಂದಕ್ಕೆ
ವಿಜಯವಾಡ: ಮಹತ್ವದ ಬೆಳವಣಿಗೆಯಲ್ಲಿ ಟಿಟಿಡಿ ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನವನ್ನು ಆರು ದಿನಗಳ ಕಾಲ ಮುಚ್ಚುವ ತನ್ನ ನಿಧರ್ಾರವನ್ನು ಹಿಂಪಡೆದಿದೆ. ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಟಿಟಿಡಿ ಅಧಿಕಾರಿಗಳೊಡನೆ ಮಾತುಕತೆ ನಡೆಸಿದ ಬಳಿಕ ಆಡಳಿತ ಮಂಡಳಿಉಯು ದೇವಸ್ಥಾನವನ್ನು ಮುಚ್ಚುವ ಬದಲು ಅಂದು ಸೀಮಿತ ಸಂಖ್ಯೆಯ ಭಕ್ತಾದಿಗಳಿಗೆ ಅವಕಾಶ ಕಲ್ಪಿಸಿಕೊಡಲು ತೀಮರ್ಾನಿಸಿದೆ.
ಎರಡು ದಿನಗಳ ಹಿಂದೆ ಸಭೆ ಸೇರಿದ್ದ ತಿರುಮಲ ತಿರುಪತಿ ದೇವಸ್ಥಾನಂ ಆಡಳಿತ ಮಂಡಳಿಯು ದೇವಾಲಯ ಶುದ್ದೀಕರಣ ಕಾರಣ ಆಗಸ್ಟ್ 9 ರಿಂದ ಆಗಸ್ಟ್ 17ರವರೆಗೆ ಭಕ್ತಾದಿಗಳಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶವಿಲ್ಲ ಎಂದು ಪ್ರಕಟಣೆ ಹೊರಡಿಸಿತ್ತು.
ದೇವಸ್ಥಾನದ ಆವರಣವನ್ನು ಶುದ್ದೀಕರಿಸುವ ಧಾಮರ್ಿಕ ಆಚರಣೆ ಮಹಾ ಸಂಪ್ರೋಕ್ಷಣ ವಿಧಿ ನೆರವೇರಿಸಲು ಆಗಸ್ಟ್ ನಲ್ಲಿ ಆರು ದಿನಗಳ ಕಾಲ ದೇವಾಲಯ ಸಂಕೀರ್ಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎನ್ನುವ ಟಿಟಿಡಿ ಪ್ರಕಟಣೆಗೆ ಭಕ್ತಾದಿಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಹ ಟಿಟಿಡಿ ತನ್ನ ಈ ನಿಧರ್ಾರವನ್ನು ಪುನರ್ ಪರಿಶೀಲಿಸಲು ಆಗ್ರಹಿಸಿದ್ದರು.
ಮಂಗಳವಾರ ಮಾಧ್ಯಮಗಳೊಡನೆ ಮಾತನಾಡಿದ ಟಿಟಿಡಿ ಇಒ ಅನಿಲ್ ಕುಮಾರ್ ಸಿಂಘಾಲ್, ಟಿಟಿಡಿ ಏಕಪಕ್ಷೀಯ ನಿಧರ್ಾರ ತೆಗೆದುಕೊಳ್ಳುವುದಿಲ್ಲ. ಭಕ್ತರ ಅಭಿಪ್ರಾಯಗಳನ್ನು ಪರಿಗಣಿಸಲಿದೆ ಎಂದರು.ಧಾಮರ್ಿಕ ವಿಧಿಗಳ ಆಚರಣೆ ವೇಳೆ ದೇವಾಲಯ ಮುಚ್ಚುವದರಿಂದ ಭಕ್ತಾದಿಗಳಿಗೆ ಅನಾನುಕೂಲವಾಗಲಿದೆ. ಹೀಗಾಗಿ ಇದನ್ನು ತಪ್ಪಿಸಲು ಸೀಮಿತ ಸಂಖ್ಯೆಯ ಭಕ್ತರಿಗೆ ಶ್ರೀವಾರಿಯ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.ಆದರೆ, ಜುಲೈ 24 ರಂದು ಈ ಸಂಬಂಧ ಅಂತಿಮ ನಿಧರ್ಾರ ತೆಗೆದುಕೊಳ್ಳುತ್ತೇವೆ ಅಲ್ಲಿಯವರೆಗೆ ಭಕ್ತರು, ಮತ್ತು ತಜ್ಞರ ಅಭಿಪ್ರಾಯಗಳನ್ನು ನಾವು ಪರಿಶೀಲಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಶುದ್ದೀಕರಣ ಕಾರ್ಯ ನಡೆಯುವ ದಿನ ಭಕ್ತರು ದಿನಕ್ಕೆ ಮೂರು ಅಥವಾ ನಾಲ್ಕು ಗಂಟೆಗಳ ಕಾಲ ದೇವರ ದರ್ಶನ ಪಡೆಯಬಹುದಾಗಿದೆ. ಇದರರ್ಥ 25,000-30,000 ಯಾತ್ರಿಕರು ಪ್ರತಿದಿನ ದರ್ಶನವನ್ನು ಹೊಂದಲಿದ್ದಾರೆ.
ದೇವಾಲಯಕ್ಕೆ ಸಣ್ಣ ಸಣ್ಣ ತಂಡಗಳಲ್ಲಿ ಭಕ್ತಾದಿಗಳು ಪ್ರವೇಶಿಸಬಹುದು ಎಂದು ದೇವಾಲಯದ ಮೂಲಗಳು ಹೇಳಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 