ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಮೂಡಲಗಿ ತಾಲೂಕಿನ ಕುಲಗೋಡ ಪೊಲೀಸರು ವಶ
The auto rickshaw and 9.6 lakh gold ornaments were seized by the Kulgoda police of Moodlagi taluk
ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಮೂಡಲಗಿ ತಾಲೂಕಿನ ಕುಲಗೋಡ ಪೊಲೀಸರು ವಶ
ಮೂಡಲಗಿ 03 : ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಆಟೋ ರಿಕ್ಷಾ ಹಾಗೂ 9.6 ಲಕ್ಷದ ಬಂಗಾರ ಆಭರಣಗಳನ್ನು ಮೂಡಲಗಿ ತಾಲೂಕಿನ ಕುಲಗೋಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೋಕಾಕ ನಗರದ ರಾಘವೇಂದ್ರ ರಾಮು ರೇವಣಕರ(22) ಹಾಗೂ ಓಂಕಾರ ದಯಾನಂದ ಜಾಧವ(21) ಬಂಧಿತ ಆರೋಪಿಗಳು ಕಳೆದ ಸೆ ಪ್ಟಂಬರ್ ನಲ್ಲಿ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಮನೆಯೊಂದರ ಕೀಲಿ ಮುರಿದು ಮನೆಯಲ್ಲಿದ್ದ ಚಿನ್ನ ಕಳ್ಳತನವಾದ ಬಗ್ಗೆ ಕುಲಗೋಡ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಎಸ್.ಪಿ ಯವರ ಮಾರ್ಗದರ್ಶನದಲ್ಲಿ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ ಹಾಗೂ ಪಿ.ಎಸ್.ಐ ಆನಂದ ಬಿ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ತಂಡವನ್ನು ರಚಿಸಿ ಆರೋಪಿಗಳ ಬಂಧಿಸಿ 9.6 ಲಕ್ಷ ಮೌಲ್ಯದ 113 ಗ್ರಾಂ ಬಂಗಾರ ಮತ್ತು ಆಟೋರಿಕ್ಷಾ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕಾರ್ಯಚರಣೆಯಲ್ಲಿ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ. ಕುಲಗೋಡ ಪಿ.ಎಸ್.ಐ ಆನಂದ ಬಿ. ಪಿ.ಎಸ್.ಐ 2 ವಿ.ವಿ ಉತ್ರೇಶ್ವರ. ಎಮ್.ಬಿ ಕರಣಿ. ವಾಯ್.ಎಮ್.ಸಾಂಗಲಿ. ಎಸ್.ವಿ ಹಣಜಿ. ಎಮ್.ಬಿ ಆಡಿನ. ಕೆ.ಸಿ ಬಾಗಲಿ. ಎಮ್.ಎಸ್ ಕುರೆನ್ನವರ. ಎಸ್.ಎನ್ ಬಡಬಡೆ. ಎಲ್.ಎಲ್. ಪೂಜೇರ. ಎಸ್.ಎಫ ಮಳಲಿ. ವಿ.ಎಲ್ ದೂಳಪ್ಪನವರ. ಎ.ಎಚ್ ವೇಶಧಾರಿ. ವಿನೋದ ಟಕ್ಕನವರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 