ಸಂಕ್ರಮಣದ ನಿಮಿತ್ಯ ಸಂಭ್ರಮದ ತೆಪ್ಪೋತ್ಸವ
ಲೋಕದರ್ಶನ ವರದಿ
ಮುನವಳ್ಳಿ 16: ಜ. 15 ರಂದು ಸಾಯಂಕಾಲ 5.30 ಗಂಟೆಗೆ ಇಲ್ಲಿನ ಶಿಂದೋಗಿ-ಮುನವಳ್ಳಿಯ ಕುಮಾರೇಶ್ವರ ಆಲೂರಮಠದ ವತಿಯಿಂದ ಮಲಪ್ರಭಾ ನದಿಯಲ್ಲಿ ಮಕರ ಸಂಕ್ರಮಣದ ನಿಮಿತ್ಯ ತೆಪ್ಪೋತ್ಸವ ಸಂಭ್ರಮ ಹಾಗೂ ವಿಜೃಂಭಣೆಯಿಂದ ಜರುಗಿತು.
ತೆಪ್ಪೋತ್ಸವದ ತೇರಿನಲ್ಲಿ ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಆಸೀನರಾಗಿ ಭಕ್ತರಿಗೆ ದರ್ಶನಾಶೀವರ್ಾದ ನೀಡಿದರು. ಈ ಸಂದರ್ಭದಲ್ಲಿ ಸೋಮಶೇಖರಮಠದ ಮುರುಘೇಂದ್ರ ಸ್ವಾಮೀಜಿ, ಸವದತ್ತಿ ಸ್ವಾದಿಮಠದ ಶಿವಬಸವ ಸ್ವಾಮೀಜಿ, ಕಲ್ಮಠದ ಶಿವಲಿಂಗ ಸ್ವಾಮೀಜಿ, ಶಿಂದೋಗಿಯ ಮಡಿವಾಳಯ್ಯಸ್ವಾಮಿ ಹಿರೇಮಠ, ಈರಯ್ಯಸ್ವಾಮಿ ಹಿರೇಮಠ ಹಾಗೂ ಶಿಂದೋಗಿ-ಮುನವಳ್ಳಿ ಸಮಸ್ತ ಸದ್ಭಕ್ತರು ಉಪಸ್ಥಿತರಿದ್ದರು. ಉತ್ತತ್ತಿ ಹಾಗೂ ಬಾಳೆಹಣ್ಣುಗಳನ್ನು ತೆಪ್ಪದತ್ತ ಭಕ್ತರು ಭಕ್ತಿಭಾವದಿಂದ ಹಾರಿಸುತ್ತಿದ್ದರು. ಕಾರ್ಯಕ್ರಮದ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಜರುಗಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 