ಸಂಕ್ರಮಣದ ನಿಮಿತ್ಯ ಸಂಭ್ರಮದ ತೆಪ್ಪೋತ್ಸವ
ಲೋಕದರ್ಶನ ವರದಿ
ಮುನವಳ್ಳಿ 16: ಜ. 15 ರಂದು ಸಾಯಂಕಾಲ 5.30 ಗಂಟೆಗೆ ಇಲ್ಲಿನ ಶಿಂದೋಗಿ-ಮುನವಳ್ಳಿಯ ಕುಮಾರೇಶ್ವರ ಆಲೂರಮಠದ ವತಿಯಿಂದ ಮಲಪ್ರಭಾ ನದಿಯಲ್ಲಿ ಮಕರ ಸಂಕ್ರಮಣದ ನಿಮಿತ್ಯ ತೆಪ್ಪೋತ್ಸವ ಸಂಭ್ರಮ ಹಾಗೂ ವಿಜೃಂಭಣೆಯಿಂದ ಜರುಗಿತು.
ತೆಪ್ಪೋತ್ಸವದ ತೇರಿನಲ್ಲಿ ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಆಸೀನರಾಗಿ ಭಕ್ತರಿಗೆ ದರ್ಶನಾಶೀವರ್ಾದ ನೀಡಿದರು. ಈ ಸಂದರ್ಭದಲ್ಲಿ ಸೋಮಶೇಖರಮಠದ ಮುರುಘೇಂದ್ರ ಸ್ವಾಮೀಜಿ, ಸವದತ್ತಿ ಸ್ವಾದಿಮಠದ ಶಿವಬಸವ ಸ್ವಾಮೀಜಿ, ಕಲ್ಮಠದ ಶಿವಲಿಂಗ ಸ್ವಾಮೀಜಿ, ಶಿಂದೋಗಿಯ ಮಡಿವಾಳಯ್ಯಸ್ವಾಮಿ ಹಿರೇಮಠ, ಈರಯ್ಯಸ್ವಾಮಿ ಹಿರೇಮಠ ಹಾಗೂ ಶಿಂದೋಗಿ-ಮುನವಳ್ಳಿ ಸಮಸ್ತ ಸದ್ಭಕ್ತರು ಉಪಸ್ಥಿತರಿದ್ದರು. ಉತ್ತತ್ತಿ ಹಾಗೂ ಬಾಳೆಹಣ್ಣುಗಳನ್ನು ತೆಪ್ಪದತ್ತ ಭಕ್ತರು ಭಕ್ತಿಭಾವದಿಂದ ಹಾರಿಸುತ್ತಿದ್ದರು. ಕಾರ್ಯಕ್ರಮದ ಮೊದಲು ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಾದ್ಯ ವೈಭವಗಳೊಂದಿಗೆ ಪಲ್ಲಕ್ಕಿ ಉತ್ಸವ ಜರುಗಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 