ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಗೊಬ್ಬರ ಪೂರೈಸಿಲ್ಲ ಮುಖ್ಯಮಂತ್ರಿಗಳು ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ : ಶಾಸಕ ಶ್ರೀನಿವಾಸ
The central government has not supplied fertilizer as per the state's demand, but the central gover
ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಗೊಬ್ಬರ ಪೂರೈಸಿಲ್ಲ ಮುಖ್ಯಮಂತ್ರಿಗಳು ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ : ಶಾಸಕ ಶ್ರೀನಿವಾಸ
ಹಾನಗಲ್ 1: ಬಿತ್ತನೆ ಬೀಜ, ಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ನಡೆಸಿದ ಬಿಜೆಪಿಯಿಂದ ರಾಜ್ಯ ಸರ್ಕಾರ ಪಾಠ ಕಲಿಯಬೇಕಿಲ್ಲ. ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ಗೊಬ್ಬರ ಪೂರೈಸಿಲ್ಲ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳು ಪತ್ರ ಬರೆದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು ಕೇಂದ್ರದಿಂದ ನಮ್ಮ ರಾಜ್ಯಕ್ಕೆ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು. ಆದರೆ 5.27 ಲಕ್ಷ ಮೆಟ್ರಿಕ್ ಟನ್ ಮಾತ್ರ ಪೂರೈಕೆಯಾಗಿದೆ. ರಸಗೊಬ್ಬರ ಉತ್ಪಾದನೆ ಮಾಡಿ, ಪೂರೈಕೆ ಮಾಡುವುದು ಕೇಂದ್ರ ಸರ್ಕಾರ. ಬಿಜೆಪಿ ಆಡಳಿತ ನಡೆಸುತ್ತಿರುವ ಹರಿಯಾಣ, ಮಧ್ಯಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಸಹ ರಸಗೊಬ್ಬರದ ಕೊರತೆ ಇದೆ. ವಾಸ್ತವ ಹೀಗಿರುವಾಗ ರೈತರ ದಿಕ್ಕು ತಪ್ಪಿಸುವ ಉದ್ದೇಶದಿಂದ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.ಹಿಂದೆ ಬಿ.ಎಸ್.ಯಡಿಯೂರ್ಪ ಅವರು ಮುಖ್ಯಮಂತ್ರಿ ಇದ್ದಾಗ ರಸಗೊಬ್ಬರ ಕೇಳಿದ ರೈತರ ಮೇಲೆ ಹಾವೇರಿಯಲ್ಲಿ ಗುಂಡು ಹಾರಿಸಿ ಇಬ್ಬರು ರೈತರನ್ನು ಕೊಂದಿದ್ದರು. ಅದನ್ನೊಮ್ಮೆ ನೆನಪಿಸಿಕೊಳ್ಳಲಿ ಎಂದಿರುವ ಶಾಸಕ ಮಾನೆ, ಹಾವೇರಿ ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಅವಧಿಗೆ ಮೊದಲೇ ಮುಂಗಾರು ಆರಂಭಗೊಂಡಿದೆ. ಜಿಟಿ ಜಿಟಿ ಮಳೆ ಬೀಳುತ್ತಿದೆ. ಸಹಜವಾಗಿ ರೈತರು ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರ ಬಳಕೆಗೆ ಮುಂದಾಗಿದ್ದಾರೆ. ಬಿಜೆಪಿ ಸಂಸದರು ಮತ್ತು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರ ಕೃಷಿ ಸಚಿವರೊಂದಿಗೆ ಮಾತನಾಡಿ ಕೂಡಲೇ ರಾಜ್ಯಕ್ಕೆ ಅ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 