ನೂತನ ಆಂಜನೇಯ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು
The chariot festival of the new Anjaneya Swamy was celebrated with great pomp
ನೂತನ ಆಂಜನೇಯ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು
ಹೂವಿನಹಡಗಲಿ 31: ತಾಲೂಕಿನ ವಿನೋಬನಗರ ಮಿರಾಕೊರನಹಳ್ಳಿ ಗ್ರಾಮದ ನೂತನವಾಗಿ ನಿರ್ಮಿಸಿದ ಆಂಜನೇಯ ಸ್ವಾಮಿಯ ರಥೋತ್ಸವವು ಸಮಳ ನಂದಿಕೋಲು ಡ್ರಮ್ ಸೆಟ್ ವಾದ್ಯ ಸಕಲ ಮೇಳಗಳೊಂದಿಗೆ ಗವಿಮಠದ ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳ ಪಾವನ ದಿವ್ಯ ಸಾನಿಧ್ಯದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಜರುಗಿತು. ಭಕ್ತರು ತೇರಿಗೆ ಬಾಳೆಹಣ್ಣು ಹೂವು ಸಮರ್ಿಸಿ ತೇರನ್ನೆಳೆದು ತಮ್ಮ ಭಕ್ತಿ ಇಷ್ಟಾರ್ಥಗಳನ್ನು ಸ್ವಾಮಿಗೆ ಸಮರ್ಿಸಿ ಸ್ವಾಮಿಯ ಕೃಪಾಶೀರ್ವಾದಕ್ಕೆ ಪಾತ್ರರಾದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾಮಿಯ ಪಟಾಕ್ಷಿ ಹರಾಜು ಪ್ರಕ್ರಿಯೆ ನಡೆಯಿತು ವಿನೋಬ ನಗರ ಗ್ರಾಮದ ಊರಾಳ ಲಕ್ಷ್ಮಣ ಇವರು 26.101ರೂಗಳಿಗೆ ಹರಾಜಿನಲ್ಲಿ ಪಡೆದರು. ಗ್ರಾಮ ಪಂಚಾಯಿತಿ ಸದಸ್ಯರಾದ ಜಿ. ಶರಣಗೌಡ ಹರಾಜು ಪ್ರಕ್ರಿಯೆ ನಡೆಸಿಕೊಟ್ಟರು. ರಥೋತ್ಸವಕ್ಕೆ ಬಂದಂತಹ ಭಕ್ತರಿಗೆ ಶಿಕ್ಷಕರಾದ ಮಡ್ಡಿ ಗಣೇಶ ಹಾಗೂ ಕುಟುಂಬ ವರ್ಗದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 