ನೂತನ ಆಂಜನೇಯ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು
The chariot festival of the new Anjaneya Swamy was celebrated with great pomp
ನೂತನ ಆಂಜನೇಯ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು
ಹೂವಿನಹಡಗಲಿ 31: ತಾಲೂಕಿನ ವಿನೋಬನಗರ ಮಿರಾಕೊರನಹಳ್ಳಿ ಗ್ರಾಮದ ನೂತನವಾಗಿ ನಿರ್ಮಿಸಿದ ಆಂಜನೇಯ ಸ್ವಾಮಿಯ ರಥೋತ್ಸವವು ಸಮಳ ನಂದಿಕೋಲು ಡ್ರಮ್ ಸೆಟ್ ವಾದ್ಯ ಸಕಲ ಮೇಳಗಳೊಂದಿಗೆ ಗವಿಮಠದ ಡಾ. ಹಿರಿ ಶಾಂತವೀರ ಮಹಾಸ್ವಾಮಿಗಳ ಪಾವನ ದಿವ್ಯ ಸಾನಿಧ್ಯದಲ್ಲಿ ಅಪಾರ ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಜರುಗಿತು. ಭಕ್ತರು ತೇರಿಗೆ ಬಾಳೆಹಣ್ಣು ಹೂವು ಸಮರ್ಿಸಿ ತೇರನ್ನೆಳೆದು ತಮ್ಮ ಭಕ್ತಿ ಇಷ್ಟಾರ್ಥಗಳನ್ನು ಸ್ವಾಮಿಗೆ ಸಮರ್ಿಸಿ ಸ್ವಾಮಿಯ ಕೃಪಾಶೀರ್ವಾದಕ್ಕೆ ಪಾತ್ರರಾದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾಮಿಯ ಪಟಾಕ್ಷಿ ಹರಾಜು ಪ್ರಕ್ರಿಯೆ ನಡೆಯಿತು ವಿನೋಬ ನಗರ ಗ್ರಾಮದ ಊರಾಳ ಲಕ್ಷ್ಮಣ ಇವರು 26.101ರೂಗಳಿಗೆ ಹರಾಜಿನಲ್ಲಿ ಪಡೆದರು. ಗ್ರಾಮ ಪಂಚಾಯಿತಿ ಸದಸ್ಯರಾದ ಜಿ. ಶರಣಗೌಡ ಹರಾಜು ಪ್ರಕ್ರಿಯೆ ನಡೆಸಿಕೊಟ್ಟರು. ರಥೋತ್ಸವಕ್ಕೆ ಬಂದಂತಹ ಭಕ್ತರಿಗೆ ಶಿಕ್ಷಕರಾದ ಮಡ್ಡಿ ಗಣೇಶ ಹಾಗೂ ಕುಟುಂಬ ವರ್ಗದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 