ಪರಿಸರ ನಾಶದಿಂದ ದೇಶಕ್ಕೆ ಅಪಾಯ ಕಾದಿದೆ: ಪಕ್ಕಿರೇಶ್ವರ ಸ್ವಾಮಿಗಳು
ಲೋಕದರ್ಶನ ವರದಿ
ಗದಗ 16: ಪರಿಸರ ನಾಶದಿಂದ ಇಂದು ಮಳೆಬೆಳೆ ಕಡಿಯಾಗುತ್ತಿರುವದರಿಂದ ನಾವೇಲ್ಲರೂ ಬರಗಾಲವನ್ನು ಎದುರಿಸುತ್ತಿದ್ದೆವೆ ಈ ಬಗ್ಗೆ ಪರಿಸರ ಜಾಗೃತಿ ಅವಶ್ಯವಾಗಿದೆ ಎಂದು ಮಲ್ಲಸಮುದ್ರಗಿರಿ ಓಂಕಾರೇಶ್ವರ ಮಠದ ಫಕ್ಕಿರೇಶ್ವರ ಮಹಾಸ್ವಾಮಿಗಳು ಹೇಳಿದರು.
ಎಸ್.ಎಂಕೃಷ್ಣಾ ನಗರದಲ್ಲಿರುವ ಸಿದ್ದಾರ್ಥ/ಜೈ ಹನುಮಾನ ಸಮಾಜದ ವಿವಿದೋದ್ದೇಶಗಳ ಸೇವಾ ಸಂಘ ವತಿಯಿಂದ 5 ನೇ ವಾಷರ್ಿಕೋತ್ಸವ ಹಾಗೂ ಮಳೆಗಾಗಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಪಡೆಸುತ್ತಿದ್ದಾನೆ. ಇದು ಹೀಗೆ ಮುಂದುವರೆದರೆ ಮನುಕುಲದ ಅವನತಿಗೆ ಕಾರಣವಾಗಲಿದೆ ಅದ್ದರಿಂದ ಪರಿಸರ ರಕ್ಷಣೆಗೆ ಪ್ರತಿಯೊಬ್ಬರು ಕೈಜೋಡಿಸ ಮುಂದಿನ ಭವಿಷ್ಯಕ್ಕೆ ಪರಿಸರವನ್ನು ಅಭಿವೃದ್ಧಿಗೊಳಿಸಬೇಕಾಗಿದೆ. ಸಂಘ-ಸಂಸ್ಥೆಗಳು ಇಂತಹ ಕಾರ್ಯಕ್ರಮಗಳು ಹಮ್ಮಿಕೊಂಡು ಪರಿಸರ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದು ಹೇಳಿದರು.
ಪ್ರೋ. ಶಿವಾನಂದ ಗೋಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಗೊಂಡಸ್ವಾಮಿ ಕಳಕಣ್ಣವರ ಅಧ್ಯಕ್ಷತೆವಹಿಸಿದ್ದರು. ರಂಗಪ್ಪ ಹುಯಿಲಗೋಳ, ಮುತ್ತು ಜಡಿ, ತೋಟಯ್ಯ ಹಿರೇಮಠ, ಮಲ್ಲೇಶ ಬಿಂಗಿ, ಬಸವರಾಜ ಕಡೇಮನಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಪರಶುರಾಮ ಕಳಕಣ್ಣವರ ಪ್ರಾಥರ್ಿಸಿದರು. ಧಮರ್ೇಂದ್ರ ಇಟಗಿ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 