ವೃತ್ತಿ ಬುನಾದಿ ತರಬೇತಿಯ ಸಮಾರೋಪ
ಧಾರವಾಡ 01: ಇಂದು ಜಗತ್ತಿನಾದ್ಯಂತ ಡಿಜಿಟಲ್ ತಂತ್ರಜ್ಞಾನವು ಅದ್ಭುತವಾದ ಕಾರ್ಯ ನಿರ್ವಹಿಸುತ್ತಿದೆ. ಜಗತ್ತಿನಾದ್ಯಂತ ವಾಟ್ಸಪ್, ಫೇಸಬುಕ್, ಜಿ ಮೇಲ್ ಖಾತೆಗಳನ್ನು ಹೊಂದುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭವಿಷತ್ತಿನಲ್ಲಿ ಮನೆಯಲ್ಲಿಯೇ ಕುಳಿತು ಒಔಔಅ ನಂತಹ ಆನಲೈನ ಕೋರ್ಸಗಳ ಮೂಲಕ ಉನ್ನತ ಶಿಕ್ಷಣ ಪಡೆಯಬಹುದಾಗಿದೆ ಎಂದು ಬೆಂಗಳೂರು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದಶರ್ಿ ಡಾ.ಎಮ್.ಎನ್ ವಿದ್ಯಾಶಂಕರ ಹೇಳಿದರು.
ಅವರು ಇಲ್ಲಿನ ಉನ್ನತ ಶಿಕ್ಷಣ ಅಕಾಡೆಮಿಯ ಗಣಕ ವಿಜ್ಞಾನ ವಿಷಯದ 21 ದಿನಗಳ ಸಹಾಯಕ ಪ್ರಾಧ್ಯಾಪಕರುಗಳಿಗೆ ವೃತ್ತಿ ಬುನಾದಿ ತರಬೇತಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾತಾಡಿದರು.
ಉನ್ನತ ಶಿಕ್ಷಣ ಅಕಾಡೆಮಿಯ ನಿದರ್ೇಶಕ ಪ್ರೊ.ಎಸ್.ಎಂ. ಶಿವಪ್ರಸಾದ ಅವರು ಮಾತನಾಡಿ ಯಾವುದೇ ತಂತ್ರಜ್ಞಾನವು ಮನುಷ್ಯನನ್ನು/ ಶಿಕ್ಷಕರನ್ನು ಬದಲಾಯಿಸಲಾರದು. ಯಾಕೆಂದರೆ ಮನುಷ್ಯನಿಗೆ ಭಾವನಾತ್ಮಕ ಸಂಬಂಧವಿರವುದರಿಂದ ಸಾಮಾಜಿಕ ಸಮಸ್ಯೆಗಳನ್ನು ಬಗೆ ಹರಿಸಲು ಮನುಷ್ಯನ/ ಶಿಕ್ಷಕನ ಅವಶ್ಯಕತೆ ಇದೆ ಎಂದು ಹೇಳಿದರು.
ಈ ಕಾರ್ಯವು ಶಿಕ್ಷಕರಿಂದ ಮಾತ್ರ ಸಾಧ್ಯ. ಅಂತಹ ಸದೃಢ ಶಿಕ್ಷಕರನ್ನು ನಿಮರ್ಿಸುವ ಗುರುತರವಾದ ಜವಾಬ್ದಾರಿ ಉನ್ನತ ಶಿಕ್ಷಣ ಅಕಾಡೆಮಿಯದಾಗಿದೆ ಎಂದು ಅಧ್ಯಕ್ಷೀಯ ಮಾತುಗಳನ್ನಾಡಿದರು.
ಡಾ.ಎಚ್. ಬಿ.ನೀಲಗುಂದ ಸ್ವಾಗತಿಸಿ, ನಿರೂಪಿಸಿದರು. ಅಕಾಡೆಮಿಯ ಡೀನರಾದ ಡಾ.ಎ.ಆರ್.ಜಗತಾಪ ವಂದಿಸಿದರು. ಡಾ.ಆಯ್.ಬಿ.ಸಾತೀಹಾಳ, ಡಾ.ಅರುಂಧತಿ ಕುಲಕಣರ್ಿ, ಗ್ರಂಥಪಾಲಕ ಡಾ.ಮಲ್ಲಿಕಾಜರ್ುನ ಮೂಲಿಮನಿ ಹಾಗೂ ಅಕಾಡೆಮಿಯ ಸಿಬ್ಬಂದಿ ಹಾಜರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 