ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಗ್ರಾಪಂ ಅಧ್ಯಕ್ಷೆ ಪೂಜಾರಿ ಈರಮ್ಮ
The future of children is in the hands of teachers: Gram Panchayat President Poojary Eeramma
ಕಂಪ್ಲಿ 14: ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಮೆಟ್ರಿ ಕ್ಲಸ್ಟರ್ವತಿಯಿಂದ ಬದಲಾವಣೆ ಶಿಕ್ಷಣ ಭವಿಷ್ಯದ ನಿರ್ಮಾಣ ಎಂಬಂತೆ ಪೋಷಕರ-ಶಿಕ್ಷಕರ ಮಹಾಸಭೆ ಶುಕ್ರವಾರ ನಡೆಯಿತು. ಗ್ರಾಪಂ ಅಧ್ಯಕ್ಷೆ ಪೂಜಾರಿ ಈರಮ್ಮ ರಮೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಪ್ರತಿಯೊಂದು ಹಂತದಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಾಗಿದೆ. ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಾಸ ಅತಿಮುಖ್ಯವಾಗಿದೆ ಎಂದರು. ಮುಖ್ಯಗುರು ಎಚ್.ಪಿ.ಸೋಮಶೇಖರ ಮಾತನಾಡಿ, ಮಕ್ಕಳಲ್ಲಿ ಒಳ್ಳೆಯ ಶಿಕ್ಷಣ ನೀಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬಂತೆ ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದರು.
ಪ್ರತಿಭಾವಂತ ಮಕ್ಕಳಿಗೆ ಹಳೆ ವಿದ್ಯಾರ್ಥಿಗಳಿಂದ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಎನ್.ನಾಗರಾಜ, ಸದಸ್ಯರಾದ ಬೂದಾಳ್ ರವಿ, ವಿರುಪಾಕ್ಷಿ, ದೇವರಮನೆ ಮಲ್ಲಿಕಾರ್ಜುನ, ಒಡೆಯರ್ಸ್ವಾಮಿ, ವಡ್ರು ಜಡೆಪ್ಪ, ಎಸ್ಡಿಎಂಸಿ ಅಧ್ಯಕ್ಷರಾದ ಶಿವರಾಜಕುಮಾರ, ದೇವರಮನೆ ಪಂಪಾಪತಿ, ಸದಸ್ಯರಾದ ಪೂಜಪ್ಪ, ಕರೇಗೌಡ್ರು ಮಂಜುನಾಥ, ಕೆ.ರಾಮಲಿ, ಗೊರವರ ಗಾದಿಲಿಂಗಪ್ಪ, ಪಿ.ನಾಗೇಶ್ವರಿ, ಸಹಕಾರ ಸಂಘದ ಅಧ್ಯಕ್ಷ ಸಿದ್ದಯ್ಯ, ಮುಖ್ಯಗುರುಗಳಾದ ಎಚ್.ಪಿ.ಸೋಮಶೇಖರ, ನಂದಕಿಶೋರ್, ಮುಖಂಡರಾದ ಸಣ್ಣ ಮರೇಗೌಡ, ಸುರೇಶಗೌಡ, ಉಮೇಶಗೌಡ, ಗುಬಾಜಿ ರಾಮಾಂಜಿನಿ, ಗೌಡ್ರು ಷಣ್ಮುಕ, ಎಸ್.ಮಾರೇಶ, ಶಿವಕುಮಾರ, ಮಲ್ಲಿಕಾರ್ಜುನ, ಟಿ.ಎನ್.ರಮೇಶ, ಉಪ್ಪಾರಹಳ್ಳಿ ಸತ್ಯಣ್ಣ ಸೇರಿದಂತೆ ಪೋಷಕರು ಹಾಗೂ ಸಹ ಶಿಕ್ಷಕರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 