ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.
The goal of every teacher should be for the last student of every school to receive a good educatio
ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆಯುವುದು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು.
ಕಾರವಾರ 25 : ಪ್ರತಿ ಶಾಲೆಯ ಕಟ್ಟಕಡೆಯ ವಿದ್ಯಾರ್ಥಿ ಉತ್ತಮ ಶಿಕ್ಷಣ ಮತ್ತು ಫಲಿತಾಂಶ ಪಡೆಯುವುದು ಪ್ರತಿಶಾಲೆಯ ಮತ್ತು ಪ್ರತಿ ಶಿಕ್ಷಕರ ಉದ್ದೇಶವಾಗಿರಬೇಕು. ಆನಿಟ್ಟಿನಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ ಆಧರಿಸಿ ವಿಶೇಷ ಕ್ರಿಯಾಯೋಜನೆ ತಯಾರಿಸಿ ಬೋಧನೆ ಕೈಗೊಂಡಲ್ಲಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ನೂರಕ್ಕೆನೂರು ಸಾಧಿಸಬಹುದು ಎಂದು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಎಎಖಾಜಿರವರು ಅಭಿಪ್ರಾಯಪಟ್ಟರು. ಸರ್ಕಾರಿ ಪ್ರೌಢಶಾಲೆ ಕಗಧಾಳಕ್ಕೆ ಆಕಸ್ಮಿಕ ಸಂದರ್ಶನ ನೀಡಿದ ಸಂದರ್ಭದಲ್ಲಿ ಶಾಲೆಯ ವತಿಯಿಂದ ಮಾಡಲಾದ ಸನ್ಮಾನ ಸ್ವೀಕರಿಸಿ ಮೇಲಿನಂತೆ ಹೇಳಿದರು. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಫಲಿತಾಂಶ ಉತ್ತಮಪಡಿಸಲು ಮಾರ್ಗದರ್ಶನ ಮಾಡಿದರು. "ಶನಿವಾರಸಂಭ್ರಮ" ನಿಮಿತ್ತ ಹಮ್ಮಿಕೊಂಡಿದ್ದ "ಸಾರ್ವಜನಿಕ ನೈರ್ಮಲ್ಯ ಮತ್ತು ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ "ಕಾರ್ಯಕ್ರಮದ ಮಹತ್ವದ ಕುರಿತು ಇದೇ ಸಂದರ್ಭದಲ್ಲಿ ಜಾಗೃತಿ ಮೂಡಿಸಲಾಯಿತು. ಶಾಲೆಯ ಸ್ವಚ್ಛತೆ ಮತ್ತು ಶಿಸ್ತುಗಮನಿಸಿ ಪ್ರಶಂಸಿಸಿದರು. ಮುಖ್ಯೋಪಾಧ್ಯಾಯರಾದ ಆರ್ಸಿರಾಠೋಡ ಮಾತನಾಡಿ ಶಾಲಾಮಕ್ಕಳ ಗುಣಾತ್ಮಕ ಕಲಿಕೆಗೆ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ಪ್ರಯತ್ನಿಸುತ್ತಿರುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಬಿಆರ್ಿ ಎಂ ಎನ ಕರಡಿಗುಡ್ಡ, ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಸಂತೋಷ ನಿಂಗರಡ್ಡಿ, ಶಿಕ್ಷಕರಾದ ಬಿ ಜಿ ಪಾಟೀಲ, ಜೆಕೆಪಾಟೀಲ್, ಹಾಗೂ ಇತರರು ಉಪಸ್ಥಿತರಿದ್ದರು. ಖ ಬಿ ಕೊಡ್ಲಿ ನಿರೂಪಿಸಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 