ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಒದಗಿದ ಅನುದಾನ ದಾನಗಳಲ್ಲಿಯೇ ಶ್ರೇಷ್ಠ : ಸಚಿವ ಎಂ. ಬಿ. ಪಾಟೀಲ
The grants provided for the development of government schools and colleges are among the best donat
ವಿಜಯಪುರ 08: ಜಾಗತಿಕ ಖ್ಯಾತಿಯ ಟೊಯೊಟಾ ಕಿರ್ಲೋಸ್ಕರ್ ಕಂಪನಿ ಸಿ.ಎಸ್.ಆರ್. ಅನುದಾನದಡಿ ಸರಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಅನುದಾನ ಒದಗಿಸಿರುವುದು ದಾನಗಳಲ್ಲಿಯೇ ಶ್ರೇಷ್ಠವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ರವಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸರಕಾರಿ ಪದವಿ ಕಾಲೇಜು ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ನಗರದ ಖಾಸಗಿ ಶಾಲೆ ಕಾಲೇಜುಗಳನ್ನು ಮೀರಿಸುವ ಕಟ್ಟಡಗಳನ್ಬು ಮಮದಾಪುರ ಭಾಗದಲ್ಲಿ ನಿರ್ಮಿಸಲಾಗಿದೆ. ಶಾಲೆಯೇ ದೇವಾಲಯ, ಮಕ್ಕಳೇ ದೇವರು ಎಂಬ ನಾಣ್ಣುಡಿಗೆ ತಕ್ಕಂತೆ ಈ ಭಾಗಕ್ಕೆ ಶಾಲೆ, ಕಾಲೇಜು ಕಟ್ಟಣ ನಿರ್ಮಾಣಕ್ಕೆ ಟೊಯೊಟಾ ಕಿರ್ಲೋಸ್ಕರ್ ಕಂಪನಿಯಿಂದ ಅತೀ ಹೆಚ್ಚು ಅನುದಾನ ದೊರೆತಿದೆ ಎಂದು ಅವರು ಹೇಳಿದರು.
ಮಮದಾಪುರದಲ್ಲಿ ಸಿದ್ಧೇಶ್ವರ ಸ್ವಾಮೀಜಿಯವರ ಜೀವವೈವಿದ್ಯತೆಯ ಅರಣ್ಯ ಪ್ರದೇಶ ನಿರ್ಮಾಣ, ಮಕ್ಕಳಿಗೆ ವಿಜ್ಞಾನ ಗ್ರಂಥಾಲಯ, ಸರಕಾರಿ ಶಾಲೆ- ಕಾಲೇಜುಗಳಿಗೆ ಕಟ್ಟಡ ನಿರ್ಮಾಣ, ಮಮದಾಪುರ ಕೆರೆ ತುಂಬುವ ಯೋಜನೆ 20 ಹಳ್ಳಿಗಳಿಗೆ ಆಧಾರವಾಗಿದ್ದು, ರೈತರು ಪ್ರತಿವರ್ಷ ರೂ. 300ಕೋ. ನಷ್ಟು ಮೌಲ್ಯದ ಸಮೃದ್ಧ ಬೆಳೆ ಬೆಳೆಯುತ್ತಿದ್ದಾರೆ. ಹೀಗೆ ಮಮದಾಪುರ ಅಭಿವೃದ್ಧಿಯತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಹೊಸ ತಾಲೂಕು ಆಗಿ ಪರಿವರ್ತನೆ ಆಗುವುದರಲ್ಲಿ ಸಂಶಯವೇ ಇಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಮದಾಪುರ ವಿರಕ್ತಮಠದ ಮುರುಘೇಂದ್ರ ಮಹಾಸ್ವಾಮೀಜಿ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಉಪಾಧ್ಯಕ್ಷ ಕೃಷ್ಣ ಜಿ. ಕುಲಕರ್ಣಿ, ಮುಖಂಡರಾದ ವಿರಣ್ಣ ಕೊಪ್ಪದ, ಟೊಯಾಟಾ ಕಂಪನಿಯ ಉಪಾಧ್ಯಕ್ಷ ರಮೇಶ ರಾವ, ಕಿರಣ, ಸಚಿವರ ಆಪ್ತ ಕಾರ್ಯದರ್ಶಿ ಪಿ. ಎಸ್. ನರೆಂದ್ರ, ಮುಖಂಡರಾದ ಮಲ್ಲಪ್ಪ ದಳವಾಯಿ, ಕುಮಾರ ದೇಸಾಯಿ, ಮಧುರಾಜ್ ಕುಲಕರ್ಣಿ, ಅಪ್ಪುಗೌಡ ಪಾಟೀಲ ಶೇಗುಣಸಿ, ಚಂದ್ರಶೇಖರ ಪೂಜಾರಿ, ಬಸು ಗಲಗಲಿ, ರಫೀಕ್ ಕಾನೆ, ವೆಂಕಟೇಶ ಬಿರಾದಾರ ಕೊಡಬಾಗಿ, ಈರನಗೌಡ ಬಿರಾದಾರ. ಸಿ. ಆರ್. ಪಾಟೀಲ, ಡಾ. ಶಿವಾನಂದ ಹಿರೇಮಠ, ಸುರೇಶ ಕರಿಕಲ್ಲ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 