ಸಂತ ಶ್ರೇಷ್ಠ ಕನಕದಾಸರು ಕೀರ್ತಿನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು
The great saint Kanakadasa worked hard to build an equal society through his hymns.
ರಾಣಿಬೆನ್ನೂರು:8 ಸಂತ ಶ್ರೇಷ್ಠ ಕನಕದಾಸರು ಕೀರ್ತಿನೆಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು ಎಂದು ಪ್ರಾಚಾರ್ಯ ಕೆ. ಹಳದಪ್ಪ ಹೇಳಿದರು. ಶನಿವಾರ ನಗರದ ಪಿ ಬಿ. ರಸ್ತೆಯಲ್ಲಿರುವ ಹೊಸಮನಿ ಸಿದ್ದಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಕದಾಸರ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಸಾಹಿತ್ಯ,ಕೀರ್ತನೆ, ಗೀತೆಗಳು ಜ್ಞಾನದ ಅಗರವಿದ್ದಂತೆ ಮತ್ತು ಸತ್ಯದ ಅರಿವು ಮೂಡಿಸುವ ಕೃತಿಗಳಾಗಿದ್ದವು ಅಲ್ಲದೆ 16ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿ ಸಮಾಜದ ಅಂಕಡೊಂಕುಗಳನ್ನು ತಿದ್ದಲು ಪ್ರಯತ್ನಿಸಿದರು. ಎಲ್ಲರೂ ಸಮಾನರು, ಪ್ರೀತಿ, ಸಹನೆ, ಮಮತೆ ಸಹಕಾರದಿಂದ ಜೀವನ ನಡೆಸಿದಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದರು. ಭೂಗೋಳ ಶಾಸ್ತ್ರದ ಉಪನ್ಯಾಸಕ ಹೆಚ್.ಶಿವಾನಂದ, ಉಪನ್ಯಾಶಕ ರೇವಣ್ಣನಾಯಕ. ಪಿ.ಟಿ, ಡಾಽ ಹೆಚ್. ಓಂಕಾರನಾಯ್ಕ, ಆಶಾ ಆರ್, ಪ್ರವೀಣ ಪಾಟೀಲ್,ಆನಂದ ಕೆ.ಇ, ಭಾಗ್ಯಹರೀಶ.ಬ್ಯಾಡಗಿ ಸೇರಿದಂತೆ ಸಿಬ್ಬಂದಿ ವರ್ಗ ಹಾಗೂ ನೂರಾರು ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 