ಹುತಾತ್ಮರಾದ ವೀರಕಲ್ಲಿಗೆ ಬಣ್ಣ ಹಚ್ಚಿ ಹೆಸರು ಕಾಣುವಂತೆ ಮಾಡಬೇಕೆಂದು ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 18: ಪಟ್ಟಣದ ಶೂರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಹುತಾತ್ಮರಾದ ವೀರಕಲ್ಲಿಗೆ ಬಣ್ಣ ಹಚ್ಚಿ ಹುತಾತ್ಮರ ಹೆಸರುಗಳು ಕಾಣುವಂತೆ ಮಾಡಬೇಕೆಂದು ಆಗ್ರಹಿಸಿ ದಿ.17 ರಂದು ನಾಗರಿಕರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
1942 ರಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಮಹಾತ್ಮರು ಪಟ್ಟಣದ ಶೂರ ಸಂಗೊಳ್ಳಿ ರಾಯಣ್ಣ ವೃತ್ತದ ಇದೇ ಸ್ಥಳದಲ್ಲಿ ಬ್ರಿಟಿಷರ ಗುಂಡಿಗೆ 7 ಜನ ಯೋಧರು ಬಲಿಯಾಗಿದ್ದಾರೆ. ಆ ಯೋಧರ ಸವಿ ನೆನಪಿಗಾಗಿ ಅಲ್ಲಿಯೋ ಹುತಾತ್ಮರಾದ 7 ಜನರ ಹೆಸರನ್ನು ಕಲ್ಲಿನಲ್ಲಿ ಕೆತ್ತಸಿ ಸ್ಮಾರಕ ವೀರಕಲ್ಲುನ್ನು ಸ್ಥಾಪನೆ ಮಾಡಲಾಗಿದೆ. ಅದಕ್ಕೆ ಸಂಪೂರ್ಣ ಹಳದಿ ಬಣ್ಣ ಹಚ್ಚಲಾಗಿದ್ದು, ಅದರಿಂದ ಹುತಾತ್ಮರ ಹೆಸರುಗಳು ಕಾಣದಂತಾಗಿವೆ. ಅವರ ಹೆಸರಿನ ಮೇಲೆ ಬಿಳಿ ಬಣ್ಣ ಹಚ್ಚಿ ಯೋಧರ ಹೆಸರು ಕಾಣುವಂತೆ ಬರೆಯಸಬೇಕೆಂದು ಆಗ್ರಹಿಸಿ ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ತಹಶೀಲ್ದಾರ ಡಾ. ದೊಡ್ಡಪ್ಪ ಹೂಗಾರ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಸಾಮಾಜಿಕ ಕಾರ್ಯಕರ್ತ ವಿ ಎಲ್ ಮಾತಾಡೆ, ಮತ್ತಿತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 