ಶ್ರೀ ಗುರು ಸಾರ್ವಭೌಮರ ಮಧ್ಯಾರಾಧನೆ, ಹರಿದು ಬಂದ ಭಕ್ತ ಸಾಗರ
The ocean of devotees poured in to worship Sri Guru Sarvabhauma
ಶ್ರೀ ಗುರು ಸಾರ್ವಭೌಮರ ಮಧ್ಯಾರಾಧನೆ, ಹರಿದು ಬಂದ ಭಕ್ತ ಸಾಗರ
ಬಳ್ಳಾರಿ: ನಗರದ ಕೌಲ್ ಬಜಾರ ಪ್ರದೇಶದ, ವ್ಯಾಸರಾಜ ಮೂಲ ಗೋಪಾಲಕೃಷ್ಣ ಮತ್ತು ಆಂಜನೇಯ ಸಹಿತ, ಜಯತೀರ್ಥರು, ಪಾದರಾಜರು, ಶ್ರೀ ವ್ಯಾಸರಾಜರ, ಶ್ರೀ ವಾದಿರಾಜರ ಹಾಗೂ ಗುರು ಸಾರ್ವಭೌಮರ ಸನ್ನಿಧಾನದಲ್ಲಿ ಮಂಗಳವಾರ ಗುರುಸಾರ್ವಭೌಮರ ಮಧ್ಯಾರಾಧನೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ರಾಘವೇಂದ್ರ ಸ್ವಾಮಿ ಅಷ್ಟೋತ್ತರ ಪಾರಾಯಣ, ಶ್ರಿಹರಿವಾಯುಸ್ತುತಿ ಮಂತ್ರ ಪಠಣೆ, ಹೊಸಪೇಟೆಯ ಪಂ. ಶ್ರೀ ವಿಶ್ವನಾಥ ಆಚಾರ್ಯರು ಸೇರಿದಂತೆ ವಿವಿಧ ಪಂಡಿತರಿಂದ ವಿಶೇಷ ಉಪನ್ಯಾಸ, ವಿಶೇಷ ಅಲಂಕಾರ, ಪಂಚಾಮೃತಾಭಿಷೇಕ, ಹಸ್ತೊದಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜೆಗಳು ವಿಜೃಂಭಣೆಯಿಂದ ನೆರವೇರಿದವು. ನಗರ ಸೇರಿದಂತೆ ನಾನಾ ಕಡೆಯಿಂದ ನೂರಾರು ಭಕ್ತರು ದೇಗುಲಕ್ಕೆ ಆಗಮಿಸಿ, ವಿಶೇಷ ಪೂಜೆ, ಅರ್ಚನೆ ಸಲ್ಲಿಸಿ ಗುರುರಾಯರ ದರ್ಶನ ಪಡೆದು ಭಕ್ತಿ ಸಮರ್ಿಸಿದರು. ಶ್ರೀ ವ್ಯಾಸರಾಜ ಶ್ರೀಮಠದ ಪ್ರಧಾನ ಅರ್ಚಕರಾದ ಶ್ರೀ ಪಾಂಡುರಂಗ ಆಚಾರ್ಯ ಅವರ ನೇತೃತ್ವದಲ್ಲಿ ಎಲ್ಲ ಪೂಜೆಗಳು ವಿಜೃಂಭಣೆಯಿಂದ ನಡೆದವು. ಇದಕ್ಕೂ ಮುನ್ನ ವಿವಿಧ ಭಜನಾ ಮಂಡಳಿ ಸದಸ್ಯರಿಂದ ಸಾಮೂಹಿಕ ಭಜನೆ, ನಡೆಯಿತು. ನಂತರ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಸಂಜೆ ಶ್ರೀಮಠದಲ್ಲಿ ಮುದ್ದು ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮಗಳು ನಡೆದವು. ಶ್ರೀಮಠದ ಎಲ್ಲ ಪದಾಧಿಕಾರಿಗಳು, ವಿವಿಧ ಗಣ್ಯರು, ಭಕ್ತರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 