ಅನಧೀಕೃತ ಕಟ್ಟಡ ನಿರ್ಮಿಸಿದರೆ ಕಚೇರಿಗೆ ಮಾಹಿತಿ ನೀಡಬೇಕು
ಲೋಕದರ್ಶನ ವರದಿ
ಕಾಗವಾಡ 18: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸರ್ಕಾರಿ ರಸ್ತೆ, ಗಲ್ಲಿ, ಉದ್ಯಾನ ಈ ಸ್ಥಳಗಳಲ್ಲಿ ಅನಧಿಕೃತವಾಗಿ ಯಾವುದೇ ಕಟ್ಟಡ ನಿಮರ್ಿಸಿದರೆ ಕೂಡಲೆ ಸಾರ್ವಜನಿಕರು ತಹಶೀಲ್ದಾರ ಕಚೇರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದ ಸಾರ್ವಜನಿಕರ ಹೆಸರು ಗುಪ್ತವಾಗಿ ಇಡಲಾಗುವುದೆಂದು ಕಾಗವಾಡ ತಹಸೀಲ್ದಾರ ಪ್ರಮೀಳಾ ದೇಶಪಾಂಡೆ ಹೇಳಿದರು.
ದಿ.17ರಂದು ಕಾಗವಾಡ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಎಲ್ಲ ಗ್ರಾಮಲೇಕ್ಕಾಧಿಕಾರಿಗಳ ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಕಾಗವಾಡ ತಾಲೂಕಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀರಣಗೌಡ ಅವನಗೌಡರ, ಗ್ರೇಡ್-2 ತಹಸೀಲ್ದಾರ ವಿಜಯ ಚೌಗುಲೆ, ಕಂದಾಯ ನೀರಿಕ್ಷಕ ಎಸ್.ಬಿ.ಮುಲ್ಲಾ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿದ್ದು. ಎಲ್ಲ ಸಿಬ್ಬಂದಿಗಳಿಗೆ ತಹಸೀಲ್ದಾರರು ಈ ಆದೇಶವನ್ನು ನೀಡಿದ್ದಾರೆ. ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಪೂಜಾ ಹೋಗಾರ್ ಮೊಬೈಲ್ ನಂ. 9606702634 ಈ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಿದಲ್ಲಿ ಅನಧಿಕೃತವಾಗಿ ಕಟ್ಟಡ ನಿಮರ್ಿಸಿದವರ ಮೇಲೆ ಕೂಡಲೆ ಕ್ರಮಜರುಗಿಸುವದಾಗಿ ತಹಸೀಲ್ದಾರ ಶ್ರೀಮತಿ ಪ್ರಮೀಳಾ ದೇಶಪಾಂಡೆ ಸಾರ್ವಜನಿಕರಿಗೆ ಆಹ್ವಾನಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 