ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಕಳಪೆ ಮತ್ತು ದಿವಾಳಿ ಬಜೆಟ್ : ಭರತ
The poorest and most bankrupt budget in Karnataka's history: Bharat
ಶಿಗ್ಗಾವಿ 07 : ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಆರ್ಥಿಕತೆಯನ್ನು ಸಂಪೂರ್ಣವಾಗಿ ಹಳಿ ತಪ್ಪಿಸಿದೆ. ಈ ಬಾರಿಯ ಬಜೆಟ್ನಲ್ಲಿ ?1,32,000 ಕೋಟಿ ಸಾಲದ ಹೊರೆ ಹೊರಿಸಲಾಗಿದ್ದು, ರಾಜ್ಯದ ಒಟ್ಟು ಹೊಣೆಗಾರಿಕೆ ?8.24 ಲಕ್ಷ ಕೋಟಿ ದಾಟಿದೆ. ಪ್ರತಿ ಕನ್ನಡಿಗನ ತಲೆಯ ಮೇಲೆ ಇಂದು ?1.17 ಲಕ್ಷ ಸಾಲದ ಪರ್ವತವಿದೆ ಎಂದು ಭಾಜಪ ಮುಖಂಡ ಭರತ ಬೊಮ್ಮಾಯಿ ಹೇಳಿದರು. ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ಆರ್ಥಿಕ ವೈಫಲ್ಯದ ಮುಖ್ಯಾಂಶಗಳು.?1,32,000 ಕೋಟಿ ಸಾಲ: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಲಾಗುತ್ತಿದೆ. ?32,000 ಕೋಟಿ ರಾಜಸ್ವ ಕೊರತೆ ಆದಾಯಕ್ಕಿಂತ ಖರ್ಚೇ ಜಾಸ್ತಿ ಮಾಡಿ ಬಜೆಟ್ ಅನ್ನು ದಿವಾಳಿ ಮಾಡಲಾಗಿದೆ.?25,000 ಕೋಟಿ ಹೆಚ್ಚುವರಿ ತೆರಿಗೆ ಹೊರೆ: ಜನರ ಜೇಬಿಗೆ ಕತ್ತರಿ ಹಾಕಿ ಹೊಸ ತೆರಿಗೆಗಳ ಮೂಲಕ ?25,000 ಕೋಟಿ ವಸೂಲಿ ಮಾಡಲು ಯೋಜನೆ ಹಾಕಲಾಗಿದೆ. ತಮ್ಮನ್ನು ಆರ್ಥಿಕ ತಜ್ಞ ಎಂದು ಕರೆದುಕೊಳ್ಳುವ ಮುಖ್ಯಮಂತ್ರಿಗಳ ಅಸಮರ್ಥ ಆಡಳಿತದಿಂದಾಗಿ, ಭಾರತದ ಬೆಳವಣಿಗೆಯ ಇಂಜಿನ್ ಆಗಿದ್ದ ಕರ್ನಾಟಕ ಇಂದು 10 ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ಸಾಲ ಮಾಡುವುದರಲ್ಲಿ ನಿಸ್ಸೀಮರಾಗಿರುವ ಸಾಲರಾಮಯ್ಯ ಅವರ ಬಜೆಟ್ ರಾಜ್ಯದ ಭವಿಷ್ಯಕ್ಕೆ ಮಾರಕ. ಇದು ಅಭಿವೃದ್ಧಿಯ ಬಜೆಟ್ ಅಲ್ಲ, ಕರ್ನಾಟಕದ ವಿನಾಶದ ಹಾದಿ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 