ಜಿಂಕೆ ಮರಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು
ಮುಂಡಗೋಡ 17: ನರಿಗಳ ದಾಳಿಯಿಂದ ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು.
ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಅರಣ್ಯದಲ್ಲಿ ಸಾಯಂಕಾಲ ಈ ಘಟನೆ ನಡೆದಿದೆ.
ಮುಂಡಗೋಡದಿಂದ ಹನುಮಾಪೂರ ಗ್ರಾಮಕ್ಕೆ ಹಾದೂ ಹೋಗುವ ರಸ್ತೆಯ ಪಕ್ಕದ ಅರಣ್ಯದಲ್ಲಿ ಜಿಂಕೆ ಮತ್ತು ಮರಿಯನ್ನು ನರಿಗಳು ಕಾಡಿನಿಂದ ಬೆನ್ನಟ್ಟಿಕೊಂಡು ರಸ್ತೆಯ ಪಕ್ಕದಲ್ಲಿ ಹೋಗುತ್ತಿರುವಾಗ ಜಿಂಕೆಯು ಭಯದಿಂದ ಮರಿಯನ್ನು ಬಿಟ್ಟು ಓಡಿ ಕಾಡು ಸೇರಿಕೊಂಡಿದೆ. ಆಗ ನರಿಗಳು ಮರಿಯನ್ನು ತಿನ್ನಲು ಹೊಂಚು ಹಾಕುವ ಸಂದರ್ಭದಲ್ಲಿ ಅದೆ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಲಕ್ಷಣ ಬನಸೋಡೆ ಹಾಗೂ ಅವರ ಸ್ನೇಹಿತರು ನರಿಗಳನ್ನು ಓಡಿಸಿ ಜಿಂಕೆ ಮರಿಯನ್ನು ರಕ್ಷಿಸಿದ್ದಾರೆ. ಅದೃಷ್ಟವಷಾತ್ ಜಿಂಕೆ ಮರಿಗೆ ಯಾವುದೆ ಪ್ರಾಣಾಪಾಯವಾಗಿಲ್ಲ. ಜಿಂಕೆ ಮರಿಯನ್ನು ತಂದು ಸುರಕ್ಷಿತವಾಗಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 