ಜಿಂಕೆ ಮರಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು
ಮುಂಡಗೋಡ 17: ನರಿಗಳ ದಾಳಿಯಿಂದ ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು.
ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಅರಣ್ಯದಲ್ಲಿ ಸಾಯಂಕಾಲ ಈ ಘಟನೆ ನಡೆದಿದೆ.
ಮುಂಡಗೋಡದಿಂದ ಹನುಮಾಪೂರ ಗ್ರಾಮಕ್ಕೆ ಹಾದೂ ಹೋಗುವ ರಸ್ತೆಯ ಪಕ್ಕದ ಅರಣ್ಯದಲ್ಲಿ ಜಿಂಕೆ ಮತ್ತು ಮರಿಯನ್ನು ನರಿಗಳು ಕಾಡಿನಿಂದ ಬೆನ್ನಟ್ಟಿಕೊಂಡು ರಸ್ತೆಯ ಪಕ್ಕದಲ್ಲಿ ಹೋಗುತ್ತಿರುವಾಗ ಜಿಂಕೆಯು ಭಯದಿಂದ ಮರಿಯನ್ನು ಬಿಟ್ಟು ಓಡಿ ಕಾಡು ಸೇರಿಕೊಂಡಿದೆ. ಆಗ ನರಿಗಳು ಮರಿಯನ್ನು ತಿನ್ನಲು ಹೊಂಚು ಹಾಕುವ ಸಂದರ್ಭದಲ್ಲಿ ಅದೆ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಲಕ್ಷಣ ಬನಸೋಡೆ ಹಾಗೂ ಅವರ ಸ್ನೇಹಿತರು ನರಿಗಳನ್ನು ಓಡಿಸಿ ಜಿಂಕೆ ಮರಿಯನ್ನು ರಕ್ಷಿಸಿದ್ದಾರೆ. ಅದೃಷ್ಟವಷಾತ್ ಜಿಂಕೆ ಮರಿಗೆ ಯಾವುದೆ ಪ್ರಾಣಾಪಾಯವಾಗಿಲ್ಲ. ಜಿಂಕೆ ಮರಿಯನ್ನು ತಂದು ಸುರಕ್ಷಿತವಾಗಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 