ಕಲ್ಲು ಕ್ವಾರಿಯ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳ ದಾಳಿ
ಲೋಕದರ್ಶನ ವರದಿ
ಸಿದ್ದಾಪುರ,28: ತಾಲೂಕಿನ ಶಿರಳಗಿ ಗ್ರಾಮಪಂಚಾಯತ ಬಾಳೆಕೊಪ್ಪ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಚಿರೆ (ಕೆಂಪು) ಕಲ್ಲು ಕ್ವಾರಿಯ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಏಳು ಟಿಲ್ಲರ್ ವಶಪಡಿಸಿಕೊಂಡಿದ್ದಾರೆ.
ಬಾಳೆಕೊಪ್ಪ ಗ್ರಾಮದ ಸವರ್ೇ ನಂ 11,12 ರಲ್ಲಿ ಸರಕಾರದಿಂದ ಏಂಟು ಜನರಿಗೆ ಮಂಜೂರಾಗಿತ್ತು. ಈ ಜಾಗದಲ್ಲಿ ಮನೆ ಕಟ್ಟಲು ಉಪಯೋಗಿಸುವ ಕೆಂಪುಕಲ್ಲುಗಳನ್ನು ಸುಮಾರು 16 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ ತೆಗೆಯಲಾಗಿದೆ. ಜಾಗ ಮಂಜೂರಿ ಪಡೆದಿದ್ದವರು ಕಲ್ಲು ಕ್ವಾರೆ ನಡೆಸಲು ನಾಲ್ವರಿಗೆ ನೀಡಿದ್ದಾರೆ. ಈ ಹಿಂದೆ ತಹಸೀಲ್ದಾರ ಪಟ್ಟರಾಜ ಗೌಡ ಈ ಸ್ಥಳದಲ್ಲಿ ಪರವಾನಿಗೆ ಇಲ್ಲದೆ ಕಲ್ಲುಕ್ವಾರೆ ನಡೆಸುತಿದ್ದ ಬಗ್ಗೆ ಮಾಹಿತಿ ಪಡೆದು ದಂಡ ಹಾಕಿದ್ದು ಆವಾಗ ಕ್ವಾರೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಪುನಃ ಕ್ವಾರೆಯನ್ನು ಆರಂಭಿಸಲಾಗಿದೆ.
ಈ ಕುರಿತು ದೂರು ಬಂದ ಹಿನ್ನೇಲೆಯಲ್ಲಿ ಶಿರಸಿ ಉಪವಿಭಾಗಾದಿಕಾರಿ ರಾಜು ಮೊಗವೀರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುಮಾರು ಒಂದು ಸಾವಿರಕ್ಕಿಂತ ಅಧಿಕ ಕಡಿದಿಟ್ಟ ಕಲ್ಲುಗಳು ಕಂಡು ಬಂದಿದೆ ಎಂದು ಉಪವಿಭಾಗಾದಿಕಾರಿ ತಿಳಿಸಿದ್ದಾರೆ. ಈ ಸಂದರ್ಬದಲ್ಲಿ ತಹಸೀಲ್ದಾರ ಪಟ್ಟರಾಜ ಗೌಡ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 