ಕಲ್ಲು ಕ್ವಾರಿಯ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳ ದಾಳಿ
ಲೋಕದರ್ಶನ ವರದಿ
ಸಿದ್ದಾಪುರ,28: ತಾಲೂಕಿನ ಶಿರಳಗಿ ಗ್ರಾಮಪಂಚಾಯತ ಬಾಳೆಕೊಪ್ಪ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಚಿರೆ (ಕೆಂಪು) ಕಲ್ಲು ಕ್ವಾರಿಯ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಏಳು ಟಿಲ್ಲರ್ ವಶಪಡಿಸಿಕೊಂಡಿದ್ದಾರೆ.
ಬಾಳೆಕೊಪ್ಪ ಗ್ರಾಮದ ಸವರ್ೇ ನಂ 11,12 ರಲ್ಲಿ ಸರಕಾರದಿಂದ ಏಂಟು ಜನರಿಗೆ ಮಂಜೂರಾಗಿತ್ತು. ಈ ಜಾಗದಲ್ಲಿ ಮನೆ ಕಟ್ಟಲು ಉಪಯೋಗಿಸುವ ಕೆಂಪುಕಲ್ಲುಗಳನ್ನು ಸುಮಾರು 16 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ ತೆಗೆಯಲಾಗಿದೆ. ಜಾಗ ಮಂಜೂರಿ ಪಡೆದಿದ್ದವರು ಕಲ್ಲು ಕ್ವಾರೆ ನಡೆಸಲು ನಾಲ್ವರಿಗೆ ನೀಡಿದ್ದಾರೆ. ಈ ಹಿಂದೆ ತಹಸೀಲ್ದಾರ ಪಟ್ಟರಾಜ ಗೌಡ ಈ ಸ್ಥಳದಲ್ಲಿ ಪರವಾನಿಗೆ ಇಲ್ಲದೆ ಕಲ್ಲುಕ್ವಾರೆ ನಡೆಸುತಿದ್ದ ಬಗ್ಗೆ ಮಾಹಿತಿ ಪಡೆದು ದಂಡ ಹಾಕಿದ್ದು ಆವಾಗ ಕ್ವಾರೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಪುನಃ ಕ್ವಾರೆಯನ್ನು ಆರಂಭಿಸಲಾಗಿದೆ.
ಈ ಕುರಿತು ದೂರು ಬಂದ ಹಿನ್ನೇಲೆಯಲ್ಲಿ ಶಿರಸಿ ಉಪವಿಭಾಗಾದಿಕಾರಿ ರಾಜು ಮೊಗವೀರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುಮಾರು ಒಂದು ಸಾವಿರಕ್ಕಿಂತ ಅಧಿಕ ಕಡಿದಿಟ್ಟ ಕಲ್ಲುಗಳು ಕಂಡು ಬಂದಿದೆ ಎಂದು ಉಪವಿಭಾಗಾದಿಕಾರಿ ತಿಳಿಸಿದ್ದಾರೆ. ಈ ಸಂದರ್ಬದಲ್ಲಿ ತಹಸೀಲ್ದಾರ ಪಟ್ಟರಾಜ ಗೌಡ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 