ಕಲ್ಲು ಕ್ವಾರಿಯ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳ ದಾಳಿ
ಲೋಕದರ್ಶನ ವರದಿ
ಸಿದ್ದಾಪುರ,28: ತಾಲೂಕಿನ ಶಿರಳಗಿ ಗ್ರಾಮಪಂಚಾಯತ ಬಾಳೆಕೊಪ್ಪ ಗ್ರಾಮದಲ್ಲಿ ಅನಧಿಕೃತವಾಗಿ ನಡೆಸುತ್ತಿದ್ದ ಚಿರೆ (ಕೆಂಪು) ಕಲ್ಲು ಕ್ವಾರಿಯ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಏಳು ಟಿಲ್ಲರ್ ವಶಪಡಿಸಿಕೊಂಡಿದ್ದಾರೆ.
ಬಾಳೆಕೊಪ್ಪ ಗ್ರಾಮದ ಸವರ್ೇ ನಂ 11,12 ರಲ್ಲಿ ಸರಕಾರದಿಂದ ಏಂಟು ಜನರಿಗೆ ಮಂಜೂರಾಗಿತ್ತು. ಈ ಜಾಗದಲ್ಲಿ ಮನೆ ಕಟ್ಟಲು ಉಪಯೋಗಿಸುವ ಕೆಂಪುಕಲ್ಲುಗಳನ್ನು ಸುಮಾರು 16 ಎಕರೆ ಪ್ರದೇಶ ವ್ಯಾಪ್ತಿಯಲ್ಲಿ ತೆಗೆಯಲಾಗಿದೆ. ಜಾಗ ಮಂಜೂರಿ ಪಡೆದಿದ್ದವರು ಕಲ್ಲು ಕ್ವಾರೆ ನಡೆಸಲು ನಾಲ್ವರಿಗೆ ನೀಡಿದ್ದಾರೆ. ಈ ಹಿಂದೆ ತಹಸೀಲ್ದಾರ ಪಟ್ಟರಾಜ ಗೌಡ ಈ ಸ್ಥಳದಲ್ಲಿ ಪರವಾನಿಗೆ ಇಲ್ಲದೆ ಕಲ್ಲುಕ್ವಾರೆ ನಡೆಸುತಿದ್ದ ಬಗ್ಗೆ ಮಾಹಿತಿ ಪಡೆದು ದಂಡ ಹಾಕಿದ್ದು ಆವಾಗ ಕ್ವಾರೆಯನ್ನು ಸ್ಥಗಿತಗೊಳಿಸಲಾಗಿತ್ತು. ನಂತರ ಪುನಃ ಕ್ವಾರೆಯನ್ನು ಆರಂಭಿಸಲಾಗಿದೆ.
ಈ ಕುರಿತು ದೂರು ಬಂದ ಹಿನ್ನೇಲೆಯಲ್ಲಿ ಶಿರಸಿ ಉಪವಿಭಾಗಾದಿಕಾರಿ ರಾಜು ಮೊಗವೀರ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು, ಸುಮಾರು ಒಂದು ಸಾವಿರಕ್ಕಿಂತ ಅಧಿಕ ಕಡಿದಿಟ್ಟ ಕಲ್ಲುಗಳು ಕಂಡು ಬಂದಿದೆ ಎಂದು ಉಪವಿಭಾಗಾದಿಕಾರಿ ತಿಳಿಸಿದ್ದಾರೆ. ಈ ಸಂದರ್ಬದಲ್ಲಿ ತಹಸೀಲ್ದಾರ ಪಟ್ಟರಾಜ ಗೌಡ ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 