ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ : ಶ್ರೀನಿವಾಸ ಮಾನೆ
The role of government employees is very important: Srinivas Mane
ಹಾನಗಲ್ 16 :ಜನಸಾಮಾನ್ಯರಿಗೆ ಸರ್ಕಾರದ ಯೋಜನೆ, ಕಾರ್ಯಕ್ರಮ ತಲುಪುವಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು. ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಿನದರ್ಶಿಕೆ ಬಿಡುಗಡೆಗೊಳಿಸಿದ ಅವರು ಸಾರ್ವಜನಿಕ ಸೇವೆಯಲ್ಲಿ ನಂಬಿಕೆ, ಪ್ರಾಮಾಣಿಕತೆ ಮತ್ತು ಮಾನವೀಯತೆಗಳನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಸೃಷ್ಟಿಯಾಗಿದೆ. ನೌಕರರು ಇನ್ನಷ್ಟು ಪರಿಣಾಮಕಾರಿಯಾಗಿ ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ತಲುಪಿಸುವಲ್ಲಿ ಶ್ರಮ ವಹಿಸಬೇಕಿದೆ ಎಂದು ಹೇಳಿದ ಅವರು ಸರ್ಕಾರ ಮತ್ತು ನೌಕರರ ನಡುವೆ ಸೌಹಾರ್ದತೆಯ ಸಂಬಂಧಕ್ಕೆ ಸಂಘ ಸೇತುವೆಯಾಗಿದೆ ಎಂದರು.
ಸಂಘದ ತಾಲೂಕಾಧ್ಯಕ್ಷ ಗುರುನಾಥ ಗವಾಣಿಕರ, ರಾಜ್ಯ ಪರಿಷತ್ ಸದಸ್ಯ ಪರಮೇಶ್ವರ ಗಾಡಿಹುಚ್ಚನವರ, ಪದಾಧಿಕಾರಿಗಳಾದ ಬಸವರಾಜ ದಿಡಗೂರ, ಬಸವರಾಜ ಕುಂಚೂರ, ಹೊನ್ನಪ್ಪ ಬಾರ್ಕಿ, ಎಂ.ಎಫ್.ಬಿಂಗಿ, ಗಂಗಾಧರ ವಡ್ಡರ, ಎ.ಪಿ.ಸುಗಂಧಿ, ಸದ್ದಾಂಹುಸೇನ್ ಜಾನ್ವೇಕರ, ಶ್ರೀಕಾಂತ ಹೊಸಮನಿ, ವೀರ್ಪ ಕರೆಗೊಂಡರ, ಖಂಡಪ್ಪ ಸಮ್ಮರ್ಗಿ, ಬಸವರಾಜ ಕರೆಪ್ಯಾಟಿ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 