ಸಮಾಜದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಪ್ರಮುಖ
The role of voluntary organizations in society is important
ರಾಣೇಬೆನ್ನೂರು 28 : ಸಮಾಜದಲ್ಲಿ ಅನೇಕ ರೀತಿಯಲ್ಲಿ ಸಾರ್ವಜನಿಕ ಸೇವೆಗಳಿವೆ ಅವುಗಳನ್ನು ಸಮರ್ಕವಾಗಿ ತಲುಪಬೇಕಾದರೆ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮುಖಂಡರು ಮತ್ತು ಕಾರ್ಯಕರ್ತರು ನಿರಂತರ ಕ್ರಿಯಾಶೀಲರಾದಾಗ ಮಾತ್ರ ಯಾವುದೇ ಸಂಸ್ಥೆಗಳು ಬೆಳೆಯುವುದರ ಜೊತೆಗೆ ಸಮಾಜವು ಸಹ ಅಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಫೆವಾರ್ಡ್ ಕೆ. ರಾಜ್ಯ ಉಪಾಧ್ಯಕ್ಷ ಎಚ್.ಎಫ್.ಅಕ್ಕಿ ಹೇಳಿದರು.
ಅವರು ಇಲ್ಲಿನ ನೀಡ್ಸ್ ಸೇವಾ ಸಂಸ್ಥೆಯ ಸಭಾಭವನದಲ್ಲಿ ನಡೆದ ಸ್ವಯಂ ಸೇವಾ ಸಂಸ್ಥೆಗಳ ಹಾವೇರಿ ಜಿಲ್ಲಾ ಒಕ್ಕೂಟದ ಸರ್ವ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯಲ್ಲಿ ಸಂಘ ಸಂಸ್ಥೆಗಳ ಒಕ್ಕೂಟವನ್ನು ಮತ್ತಷ್ಟು ಬಲಪಡಿಸಲು ನಾವೆಲ್ಲರೂ ಒಂದಾಗಿ, ಒಗ್ಗಟ್ಟಾಗಿ ಅತ್ಯಂತ ಪರಿಶ್ರಮದಿಂದ ಇತರೆ ಸಂಘ ಸಂಸ್ಥೆಗಳನ್ನು ಗುರುತಿಸಿ ಅವುಗಳ ಪುನರ್ ಚೇತನಕ್ಕೆ ಮುಂದಾಗಬೇಕಾದ ಅಗತ್ಯವಿದೆ ಎಂದರು.
ಮಹತ್ವಪೂರ್ಣವಾಗಿ ನಡೆದ ಸಭೆಯಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಮುಖಂಡರಾದ, ಮಾವಿನ ತೋಪ, ಮುತ್ತುರಾಜ್ ಮಾದರ, ಎಸ್.ಎಚ್. ಮಜೀದ್, ಏಕಾಂತ ಮುದಿಗೌಡರ, ಎಂ. ಎನ್. ಸಣ್ಣಿಗಣ್ಣನವರ, ಬಿ.ಜಿ. ಸಾಲಿ, ಕೆ.ಎಸ್. ನಾಗರಾಜ್, ಸುಶೀಲಾ ಪಾಟೀಲ್, ಶ್ರೀಧರ್ ಗಾಯಕವಾಡ, ನವೀನ್ ಫಕ್ಕಿರೇಶ್ ಸೇರಿದಂತೆ ಮತ್ತಿತರರು ಸಂಘಟನೆ ಕುರಿತು ಸಾಧ್ಯಂತವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನೈಸರ್ಗಿಕ ಪರಿಸರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಸಂಘ, ಸಂಸ್ಥೆಗಳಿಗೆ ರಾಜ್ಯ ಪರಿಸರ ಮಾಲಿನ್ಯ ಮಂಡಳಿ ಕೋಡಮಾಡುವ ಪ್ರತಿಷ್ಠಿತ
ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಪುರಸ್ಕೃತ ನೀಡ್ಸ್ ಅಧ್ಯಕ್ಷ, ಹೆಚ್.ಎಫ್. ಅಕ್ಕಿ ವನಸಿರಿ ಅಧ್ಯಕ್ಷ ಎಸ್. ಡಿ ಬಳೀಗಾರ ಮತ್ತು ರಟ್ಟಿಹಳ್ಳಿ ತಾಲೂಕಿನ ಕರಿಬಸಪ್ಪ ಕಾಗಿನೆಲ್ಲಿ ಅವರನ್ನು, ಜಿಲ್ಲೆಯ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಮುಖಂಡರು ಹಾರ್ದಿಕವಾಗಿ ಅಭಿನಂದಿಸಿ ಗೌರವಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 