ವೇದಿಕೆಯ ಪ್ರಮುಖರಿಂದ 35ನೇ ದಿನದಲ್ಲಿ ನಡೆದ ಹೋರಾಟ
The struggle on the 35th day by the leaders of the platform
ಕೊಪ್ಪಳ 04: ನಗರಸಭೆ ಆವರಣದಲ್ಲಿ ಕೊ.ಜಿ.ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ 35ನೇ ದಿನದ ಅನಿರ್ದಿಷ್ಟ ಧರಣಿಯನ್ನು ವೇದಿಯ ಪ್ರಮುಖರಿಂದ ನಡೆಸಲಾಯಿತು. ಪ್ರಧಾನ ಸಂಚಾಲಕರಾದ ಅಲ್ವಮಪ್ರಭು ಬೆಟ್ಟದೂರು ಮಾತನಾಡಿ ಸರಕಾರ ಕೊಪ್ಪಳ ಭಾಗ್ಯನಗರದ ಮೇಲೆ ಪರಿಸರ ಹಾನಿಯ ಕಾರ್ಮೋಡ ಕವಿದಿದ್ದರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಉತ್ತರ ಕರ್ನಾಟಕ ಸಮಸ್ಯೆಗಳ ಹೆಸರಿನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಉದ್ದೇಶ ಒಳ್ಳೆಯದಿದ್ದರೂ ಗಂಭೀರ ಸಮಸ್ಯೆಗಳನ್ನು ಕೈಗೆತ್ತಿಕೊಃಡು ಚರ್ಚಿಸುವಂತೆ ಮಾಡಲು ಬಲವಾದ ಜನ ಚಳವಳಿಯ ಒತ್ತಡ ಬೇಕಾಗುತ್ತದೆ. ನಾವು ಈ ಚಳಿಗಾಲದ ಅಧಿವೇಶನದ ಮುಂದೆ ಪ್ರತಿಭಟನೆ ಮಾಡೋಣ ಎಂದು ಹೇಳಿದರು.
ಶುಕ್ರವಾರ 36ನೇ ದಿನದ ಹೋರಾಟವನ್ನು ಬಾಧಿತ ಹಳ್ಳಿಗಳ ರೈತರು ದೊಡ್ಡ ಸಂಖ್ಯೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ವಿ.ಆರ್.ನಾರಾಯಣರೆಡ್ಡಿ ಇವರ ನೇತೃತ್ವದಲ್ಲಿ ಕೇಃದ್ರೀಯ ಬಸ್ ನಿಲ್ದಾಣದ ಮುಂದಿನ ಸಂತಶ್ರೇಷ್ಠ ಕನಕದಾಸ ವೃತ್ತದಿಂದ ಆರಂಭವಾಗಿ ಅಶೋಕ ವೃತ್ತದವರೆಗೆ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಮೂಲಕ ಬಂದು ಅಲ್ಲಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಕೊಟ್ಟು ನಗರಕ್ಕೆ ಹೊಂದಿಕೊಂಡ ಬಲ್ಡೋಟಾ ವಿಸ್ತರಣೆ ಮಾಡಬಾರದೆಂದು ಆಗ್ರಹಿಸುತ್ತಾರೆ ಎಂದು ಹೇಳಿದರು.
ಧರಣಿಯಲ್ಲಿ ನಿವೃತ್ತ ಉಪನ್ಯಾಸಕರು ಶಂಭುಲಿಂಗಪ್ಪ ಹರಗೇರಿ, ನಿವೃತ್ತ ಅಂಚೆ ಅಧಿಕಾರಿ ರವಿ ಕಾಂತನವರ, ಎಫ್.ಎಸ್. ಜಾಲಿಹಾಳ, ಮಹಾದೇವಪ್ಪ ಮಾವಿನಮಡು, ಮಲ್ಲಿಕಾರ್ಜುನ ಗೋನಾಳ, ಯಮನೂರ್ಪ ಹಾಲಳ್ಳಿ ಬಸಾಪುರ, ಮಖಬೂಲ ರಾಯಚೂರು, ಮಂಜುನಾಥ ಹಲಗೇರಿ, ಭೀಮಪ್ಪ ಯಲಬುರ್ಗಾ, ಬಸವರಾಜ ಶೀಲವಂತರ, ಕೇಶವ ಕಟ್ಟಿಮನಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 