ವಿಳಂಬ ಧೋರಣೆ ಮುಂದುವರೆದರೆ ಹೋರಾಟ ತೀವ್ರ : ಕುತ್ಬುದ್ದೀನ್ ಖಾಜಿ
The struggle will intensify if the delay continues: Qutbuddin Qazi
ರಬಕವಿ-ಬನಹಟ್ಟಿ 28: ಕೇಂದ್ರ ಸರ್ಕಾರ ಹಾಗೂ ರೈಲ್ವೆ ಅಧಿಕಾರಿಗಳು ಮೀನಮೇಷ ಮಾಡದೆ ಕುಡಚಿಯಿಂದ ಜಮಖಂಡಿಯ ವರೆಗೆ ರೈಲುಮಾರ್ಗ ಕಾಮಗಾರಿ ನಿರಂತರ ಮುನ್ನಡೆಸಲೇಬೇಕು. ಜನಪ್ರತಿನಿಧಿಗಳ ಪೂರಕ ಭರವಸೆ ಹಾಗೂ ಕಾಮಗಾರಿ ಪ್ರಾರಂಭದ ನಂತರ ಬೆಳಗಾವಿ ಜಿಲ್ಲೆ ಕುಡಚಿಯಲ್ಲಿ 10 ದಿನಗಳ ಕಾಲ ನಡೆದ ಸತ್ಯಾಗ್ರಹ ಮೊಟಕುಗೊಳಿಸಿದ್ದೇವೆ. ವಿಳಂಬ ಧೋರಣೆ ಮುಂದುವರೆದರೆ ಮತ್ತೆ ಹೋರಾಟ ತೀವ್ರ ಗೊಳಿಸುವುದಾಗಿ ರೈಲ್ವೆ ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದೀನ್ ಖಾಜಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಚಿ-ಬಾಗಲಕೋಟೆ ಮಾರ್ಗದ ಒಟ್ಟು 3000 ಎಕರೆ ಯಷ್ಟು ಭೂಮಿ ಸಂಪೂರ್ಣ ಸರ್ಕಾರದ ಸ್ವಾಧೀನವಾಗಿದೆ. ಸಚಿವ ಸತೀಶ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರ ಸ್ಪಂದನೆ ಮೇರೆಗೆ ಕೆಲಸ ನಿಲ್ಲಿಸದೆ ಮುಂದುವರಿಸುವ ಭರವಸೆ ನೀಡಿದ್ದು ಸ್ವಾಗತ. ಅದರಂತೆ ಕಾಮಗಾರಿಗೆ ವೇಗ ದೊರಕಿರುವುದರಿಂದ ಸತ್ಯಾಗ್ರಹ ಹಿಂಪಡೆಯಲಾಗಿದೆ ಎಂದರು.
ಕಾಮಗಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕಾರ್ಯ ಸಂಪೂರ್ಣಗೊಂಡಿದೆ. ರಾಜ್ಯದ ವಿರುದ್ಧ ಹೋರಾಟ ನಮ್ಮದಲ್ಲ. ಬದಲಾಗಿ ಕಾಮಗಾರಿಯ ಹೊಣೆ ಕೇಂದ್ರ ಸರ್ಕಾರದ್ದಾಗಿದ್ದು, ಈ ಭಾಗದ ಸಂಸದರು ಹಾಗೂ ರಾಜ್ಯ ರೈಲ್ವೆ ಮಂತ್ರಿಗಳ ಇಚ್ಛಾಶಕ್ತಿಯಿಂದ 2027 ರೊಳಗಾದರೂ ಕಾಮಗಾರಿ ಮುಗಿಸಬೇಕೆಂದು ಆಗ್ರಹಿಸಿದರು. ರೈತ ಮುಖಂಡ ಸುಭಾ ಶಿರಬೂರ, ರಾಜಶೇಖರ ಸೊರಗಾಂವಿ, ಡಾ. ರವಿ ಜಮಖಂಡಿ, ಬ್ರಿಜ್ಮೋಹನ ಡಾಗಾ, ಭುಜಬುಲಿ ಕೆಂಗಾಲಿ, ಈರ್ಪ ಹಿಪ್ಪರಗಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 