ಮರೆಗುದ್ದಿ ದಿಗಂಬರೇಶ್ವರ ದೇವಸ್ಥಾನದದಲ್ಲಿ ಕಳ್ಳತನ ದೇವರ ಮೂರ್ತಿ, ಬಂಗಾರದ ವಸ್ತುಗಳು, ಹುಂಡಿ ಹಣ ಕದ್ದು ಪರಾರಿ
Theft at Digambareshwara Temple in Mareguddi, God's idol, gold items, money stolen and fled
ಮರೆಗುದ್ದಿ ದಿಗಂಬರೇಶ್ವರ ದೇವಸ್ಥಾನದದಲ್ಲಿ ಕಳ್ಳತನ ದೇವರ ಮೂರ್ತಿ, ಬಂಗಾರದ ವಸ್ತುಗಳು, ಹುಂಡಿ ಹಣ ಕದ್ದು ಪರಾರಿ
ಜಮಖಂಡಿ 29: ದೇವರನ್ನು ಬಿಡದ ಖದೀಮ ಕಳ್ಳರು. ದೇವರ ಮೂರ್ತಿ, ಕಾಣಿಕೆ ಹುಂಡಿ, ದೇವರದ ಬಂಗಾರದ ಕಣ್ಣುಬಟ್ಟುಗಳನ್ನು ಕದ್ದ ಖದೀಮ ಕಳ್ಳರ ಗ್ಯಾಂಗ್.
ತಾಲೂಕಿನ ಮರೆಗುದ್ದಿ ಗ್ರಾಮದ ಹೊರವಲಯದಲ್ಲಿರುವ ದಿಗಂಬರೇಶ್ವರ ದೇವಸ್ಥಾನದ ದೇವರ ಬೆಳ್ಳಿಯ ಮೂರ್ತಿ ಹಾಗೂ ಹುಂಡಿಯನ್ನು ದೋಚಿ ಕಳ್ಳರು ಪರಾರಿಯಾದ ಘಟನೆ ತಡರಾತ್ರಿ ನಡೆದಿದೆ.
8 ಕೆಜಿ ತೂಕದ ದೇವರ ಬೆಳ್ಳಿಯ ಮೂರ್ತಿ ಹಾಗೂ ಅಂದಾಜು ಒಂದು ಲಕ್ಷ ರುಪಾಯಿ ಇರುವ ಹುಂಡಿಯನ್ನು ದೋಚಿದ್ದಾರೆ. ಬೆಳ್ಳಿಯ ಮೂರ್ತಿಗೆ ಚಿನ್ನದ ಕಣ್ಣುಬಟ್ಟುಗಳಿಂದ ಅಲಂಕರಿಸಲಾಗಿತ್ತು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.ಮುಖ್ಯ ಪ್ರವೇಶ ದ್ವಾರದಿಂದಲೇ ಕಳ್ಳರು ದೇವಸ್ಥಾನ ಪ್ರವೇಶಿಸಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಕಳ್ಳರ ಪತ್ತೆಗೆ ಪೊಲೀಸರು ಪ್ರತ್ಯೇಕ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.
ಘಟನೆ ತಿಳಿಯುತ್ತಿದ್ದಂತೆ ದೇವಸ್ಥಾನದ ಅರ್ಚಕರು, ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ, ಗ್ರಾಮೀಣ ಪಿಎಸ್ಐ ಗಂಗಾಧರ ಪೂಜಾರಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.
ಬರುವ ಸೆ.10ರಂದು ಮರೆಗುದ್ದಿ ಗ್ರಾಮದ ದಿಗಂಬರೇಶ್ವರ ದೇವಸ್ಥಾನದ ಜಾತ್ರೆ ನಡೆಯಲಿದ್ದು, ದೇವಸ್ಥಾನದ ಪದ್ಧತಿಯಂತೆ ಜಾತ್ರೆಯ ದಿನದಂದು ವರ್ಷಕ್ಕೊಮ್ಮೆ ಹುಂಡಿ ತೆಗೆಯುವ ಸಂಪ್ರದಾಯ ಆಚರಿಸಿಕೊಂಡು ಬರಲಾಗುತ್ತಿದೆ. ವರ್ಷ ಪೂರ್ತಿ ಭಕ್ತರು ನೀಡಿದ ಕಾಣಿಕೆಯನ್ನು ಜಾತ್ರೆಯ ಸಂದರ್ಭದಲ್ಲಿ ಉಪಯೋಗಿಸಲಾಗುತ್ತಿತ್ತು ಎನ್ನಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 