ಸಮಾಜ ಸೇವೆಯಲ್ಲಿ ಸಂತೋಷವಿದೆ : ವರುಣಗೌಡ್ರ
There is happiness in social service: Varuna Gowdra
ಸಮಾಜ ಸೇವೆಯಲ್ಲಿ ಸಂತೋಷವಿದೆ : ವರುಣಗೌಡ್ರ
ಶಿಗ್ಗಾವಿ 24 : ಯಾವುದೇ ಪಲಾಫೇಕ್ಷೆ ಇಲ್ಲದೆ ಮಾಡುವ ನಿಸ್ವಾರ್ಥ ಸೇವೆಯೂ ನಿಜವಾದ ಸಮಾಜ ಸೇವಕರ ಗುಣವನ್ನು ಸೂಚಿಸುತ್ತದೆ ಎಂದು ವರುಣಗೌಡ ಪಾಟೀಲ ಹೇಳಿದರು. 39 ನೇ ಜನ್ಮ ದಿನದ ಅಂಗವಾಗಿ ದಂಪತಿ ಸಮೇತವಾಗಿ ಹುಬ್ಬಳ್ಳಿಯ ಮಹಾವೀರ ಕೃತಕ ಕೈ ಕಾಲು ಜೋಡಣ ಕೇಂದ್ರಕ್ಕೆ ಭೇಟಿ ನೀಡಿ ಇಬ್ಬರು ಬಡ ಅಂಗವಿಕಲರಿಗೆ ಉಚಿತ ಕೃತಕ ಕಾಲು ಜೋಡಣೆ ಮಾಡಿಸಿ ನಂತರ ಮಾತನಾಡಿದ ಅವರು ನಮ್ಮ ತಂದೆಯವರ ಕಾಲದಿಂದಲೂ ಸಮಾಜ ಸೇವೆ ಧಾರ್ಮಿಕ ಸೇವೆ ಮಾಡುತ್ತ ಬಂದಿದ್ದೇವೆ ನಮ್ಮ ಎಲ್ಲ ಕೆಲಸ ಕಾರ್ಯಗಳಿಗೆ ನಮ್ಮ ತಂದೆಯವರು ನಮಗೆ ಪ್ರೇರಣೆ. ಬಡವರ ಕೂಲಿಕಾರ್ಮಿಕರ ಕಷ್ಟಗಳಲ್ಲಿ ಭಾಗಿಯಾಗುವದು ಖುಷಿ ತರುತ್ತದೆ ನಮ್ಮ ಹತ್ತಿರ ಇರುವ ಅಲ್ಪ ಸ್ವಲ್ಪದರಲ್ಲಿಯೇ ಇನ್ನೊಬ್ಬರಿಗೂ ಹಂಚಿ ತಿನ್ನುವ ಗುಣ ಇಂದಿನ ದಿನಗಳಲ್ಲಿ ಬರಬೇಕಿದೆ. ಅಂತಹ ವಿಚಾರಗಳನ್ನು ನಮ್ಮ ಮನೆಯ ಮಕ್ಕಳಿಗೆ ಹಾಗೂ ಇಂದಿನ ಪೀಳಿಗೆಗೆ ತಿಳಿಸುವ ಅವಶ್ಯಕತೆ ಇದೆ ನಮ್ಮ ಎಲ್ಲ ಕೆಲಸಗಳಿಗೆ ನಮ್ಮ ಕುಟುಂಬದ ಪ್ರೋತ್ಸಾಹ ಸಹಕಾರವಿದೆ ಎಂದರು.ಈ ಸಂದರ್ಭದಲ್ಲಿ ನಾಗರಾಜ್ ಕ್ಯಾಬಳ್ಳಿ ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 