ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೊಂದಿಲ್ಲ - ಪ್ರಾಚಾರ್ಯ ಡಾ. ಜರಕುಂಟಿ
There is no alternative to blood except blood - Principal Dr. Jarakunti
ಮುಧೋಳ 02 : ಆಧುನಿಕ ತಂತ್ರಜ್ಞಾನದ ಈ ಯುಗದಲ್ಲಿ ಅದೆಷ್ಟೇ ಆವಿಷ್ಕಾರ, ಸಂಶೋಧನೆಗಳು ನಡೆದರೂ ರಕ್ತವನ್ನು ಮಾತ್ರ ಸಂಶೋಧಿಸಲು ಈವರೆಗೆ ಯಾರಿಂದಲೂ ಸಾಧ್ಯವಾಗಿಲ್ಲ, ರಕ್ತಕ್ಕೆ ರಕ್ತವೇ ಪರ್ಯಾಯ ಹೊರತು ಬೇರೊಂದಿಲ್ಲ, ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಇನ್ನೊಬ್ಬರ ರೋಗಿಗಳ ಪ್ರಾಣ ಉಳಿಸುವ ಪುಣ್ಯದ ಕಾರ್ಯದಲ್ಲಿ ತಾವುಗಳು ಕೈ ಜೋಡಿಸಬೇಕೆಂದು ನಗರದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಮಲ್ಲಿಕಾರ್ಜುನ ಜರಕುಂಟಿ ಹೇಳಿದರು.
ಬಾಗಲಕೋಟ ಬಿವ್ಹಿವ್ಹಿ ಸಂಘದ ನಗರದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್ ಎನ್.ಸಿ.ಸಿ ಹಾಗೂ ಬಾಗಲಕೋಟೆಯ ಶ್ರೀ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಹಾನಗಲ್ ಶ್ರೀ ಕುಮಾರೇಶ್ವರ ಆಸ್ಪತ್ರೆಯ ರಕ್ತ ಭಂಡಾರದ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಅನೇಕ ಜನರ ಜೀವಗಳನ್ನು ಉಳಿಸಬಹುದು, ರಕ್ತದಾನ ಮಾಡುವದರಿಂದ ಆಗುವ ಉಪಯೋಗ ಹಾಗೂ ಅನುಕೂಲತೆಗಳ ಬಗ್ಗೆ ಉದಾಹರಣೆ ಸಮೇತ ವಿವರಿಸಿದರು.
ರಕ್ತ ಭಂಡಾರದ ಮುಖ್ಯಸ್ಥ ಕೇಶವ ಕುಲಕರ್ಣಿ ಮತ್ತು ಸಿಬ್ಬಂದಿಯವರು, ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯ ವೈದ್ಯರು, ವೈ.ಆರ್.ಸಿ ಮತ್ತು ಆರ್.ಆರ್.ಸಿ ಕಾರ್ಯಕ್ರಮಾಧಿಕಾರಿ ವೀರಣ್ಣ ಕಿತ್ತೂರ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಲೋಕೇಶ ರಾಠೋಡ, ಎನ್.ಸಿ.ಸಿ ಲೆಪ್ಟಿನೆಂಟ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಅನೀಲಕುಮಾರ ಮುನ್ನೊಳ್ಳಿ, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 