ಬಡವರು ಯಾರು ಧೃತಿಗೆಡುವ ಅವಶ್ಯಕತೆಯಿಲ್ಲ:ಪ್ರಕಾಶ ಚೌಧರಿ
ಲೋಕದರ್ಶನ ವರದಿ
ಸಿಂದಗಿ 11: ಕೊವಿಡ್-19 ವೈರಸ್ ತಡೆಗಟ್ಟುವಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ ಇಲಾಖೆ ಹಾಗೂ ಆರೋಗ್ಯ ಇಲಾಖೆ, ಪೌರಕಾರ್ಮಿ ಕ ಸಿಬ್ಬಂದಿಗಳಿಗೆ ಇಲ್ಲಿನ ಆಕ್ಸಫರ್ಡ ಕ್ನನಡ ಹಾಗೂ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದ್ದಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕ ಪ್ರಕಾಶ ಚೌಧರಿ ಮಾತನಾಡಿ, ಇಡೀ ದೇಶವೇ ಈ ವೈರಸ್ನಿಂದ ತಲ್ಲಣಗೊಂಡಿದೆ ಅದಕ್ಕಾಗಿ ಬಡವರು ಯಾರು ದೃತಿಗೆಡುವ ಅವಶ್ಯಕತೆಯಿಲ್ಲ. ಈ ವೈರಸ್ ನಿರ್ಣಾಮಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರ ಹಲವಾರು ರೀತಿಯ ಪ್ರಯತ್ನ ಮಾಡುತ್ತಿದೆ ಅಲ್ಲದೆ ಬಡ ಹಾಗೂ ಕೂಲಿ ಕಾರ್ಮಿಕರ ಉತ್ತೆಜನಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅವರಿಗೆ ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮನೆಯಲ್ಲಿಯೇ ಇದ್ದು ಅವರಿಗೆ ಸಹಕಾರ ನೀಡುವದಲ್ಲದೆ ನಮ್ಮ ಸುರಕ್ಷತೆಯನ್ನು ನಾವೇ ಕಾಪಾಡಿಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಎ.ಎಸ್.ಪಾಟೀಲ ಯಾಳವಾರ, ಶಿವಣ್ಣ ಚೋರಗಸ್ತಿ, ಆನಂದ ಶಾಬಾದಿ, ಪಂಡಿತ ಯಂಪೂರೆ, ರಮೇಶ ಪೂಜಾರಿ ಸೇರಿದಂತೆ ಇನ್ನಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 