ರಾಷ್ಟ್ರೀಯ ಜನಸಂಖ್ಯೆ ನೋಂದಣಿಗೆ ಯಾವುದೇ ದಾಖಲೆ ಇಲ್ಲವೇ ಬಯೋಮೆಟ್ರಿಕ್ ಅಗತ್ಯವಿಲ್ಲ-ಪ್ರಕಾಶ್ ಜಾವಡೇಕರ್
prakash javadeker
ನವದೆಹಲಿ, ಡಿ 24(ಯುಎನ್ಐ)- ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿವಾದ ಮತ್ತು ಪ್ರತಿಭಟನೆಗಳು ಮುಂದುವರೆದ ನಡುವೆಯೇ, ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಪ್ರಕ್ರಿಯೆಗೆ ಯಾವುದೇ ದಾಖಲೆ ಇಲ್ಲವೇ ಬಯೋಮೆಟ್ರಿಕ್ ಅಗತ್ಯವಿಲ್ಲ ಎಂದು ಕೇಂದ್ರ ವಾತರ್ಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
2020ರ ಜನಗಣತಿ ಮತ್ತು ರಾಷ್ಟ್ರೀಯ ಜನಸಂಖ್ಯೆ ನೋಂದಣಿ ನವೀಕರಣಕ್ಕೆ ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಜಾವಡೇಕರ್ ಅವರು ರಾಷ್ಟ್ರೀಯ ಜನಸಂಖ್ಯೆ ನೋಂದಣಿ 2010ರಲ್ಲಿ ಆರಂಭವಾಗಿತ್ತು. ಇದು 2015ರಲ್ಲಿ ನವೀಕರಣಗೊಂಡಿತ್ತು. ಇದಕ್ಕಾಗಿ ಯಾವುದೇ ದಾಖಲೆ ಇಲ್ಲವೇ ಬಯೋಮೆಟ್ರಿಕ್ ಅಗತ್ಯವಿಲ್ಲ. ಪ್ರಕ್ರಿಯೆಗೆ ಜನರು ಏನು ವಿವರ ನೀಡುತ್ತಾರೋ ಅದನ್ನು ತೆಗೆದುಕೊಳ್ಳಲಾಗುವುದು. ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್ಪಿ ಆರ್)ಗೂ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ ಆರ್ ಸಿ) ಸಂಬಂಧವಿಲ್ಲ. ರಾಷ್ಟ್ರೀಯ ಜನಸಂಖ್ಯೆ ನೋಂದಣಿ ನವೀಕರಣ ಪ್ರಕ್ರಿಯೆ ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ ನಡೆಯಲಿದೆ ಎಂದು ಹೇಳಿದರು.
ಎನ್ ಪಿ ಆರ್ ಗೆ 3,941 ಕೋಟಿ ರೂ, 2021ರ ಜನಗಣತಿಗೆ 8,754 ಕೋಟಿ ಅನುದಾನ ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎನ್ ಪಿ ಆರ್ ಗೆ ಎಲ್ಲ ರಾಜ್ಯಗಳು ಒಪ್ಪಿಗೆ ನೀಡಿವೆ ಎಂದು ಜಾವಡೇಕರ್ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 