ಬಣವೆಗಳಿಗೆ ಕಿಡಿ ತಗುಲಿ ಸಾವಿರಾರು ರೂ. ಮೌಲ್ಯದ ಹುಲ್ಲು ಭಸ್ಮ: ರೈತರಿಗೆ ಭಾರೀ ನಷ್ಟ
Thousands of rupees worth of grass burnt to ashes after a fire broke out in the haystacks: Huge los
ಮುಂಡಗೋಡ 11 : ಮುಂಡಗೋಡದಿಂದ ಹಿಯಲ್ಲಾಪುರ ಕಡೆಗೆ ಹೋಗುವ ರಸ್ತೆ ಪಕ್ಕದ ದೊಡ್ಡ ಕೆರೆಯ ಎಡಭಾಗದಲ್ಲಿರುವ ಮಲ್ಲೇಶಪ್ಪ ಹುದ್ಲಮನಿ ಅವರ ಹೊಲದಲ್ಲಿ ಸಂಗ್ರಹಿಸಿದ್ದ ಹುಲ್ಲಿನ ಬಣವೆಗಳಿಗೆ ಆಕಸ್ಮಿಕವಾಗಿ ಕಿಡಿ ತಗುಲಿ ಬೆಂಕಿ ಕಾಣಿಸಿಕೊಂಡ ಘಟನೆ ಬುಧವಾರ ಬೆಳಿಗ್ಗೆ 10.30ರಿಂದ 11 ಗಂಟೆಯೊಳಗೆ ನಡೆದಿದೆ. ಇದೇ ಸ್ಥಳದಲ್ಲಿ ಗಂಗಯ್ಯ ಹಿರೇಮಠ ಅವರಿಗೆ ಸೇರಿದ ಹುಲ್ಲಿನ ರೋಲ್ಗಳೂ ಬೆಂಕಿಗಾಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಕಿಡಿಗಳು ಹುಲ್ಲಿನ ರಾಶಿಗೆ ತಗುಲಿದ ಪರಿಣಾಮ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಸ್ಥಳದಲ್ಲಿದ್ದ ಸುಮಾರು 200ಕ್ಕೂ ಹೆಚ್ಚು ಹುಲ್ಲಿನ ರೋಲ್ಗಳು ಹಾಗೂ ಪೆಂಡಿಗಳು ಸುಟ್ಟು ಕರಕಲಾಗಿವೆ.
ಗಂಗಯ್ಯ ಹಿರೇಮಠ ಅವರಿಗೆ ಸೇರಿದ ಸಂಗ್ರಹಿತ ಹುಲ್ಲಿನ ರೋಲ್ಗಳೂ ಸಂಪೂರ್ಣವಾಗಿ ನಾಶವಾಗಿವೆ. ಬೇಸಿಗೆ ಸಮಯದಲ್ಲಿ ಧನ- ಕರುಗಳಿಗೆ ಮೇವುಗಾಗಿ ಸಂಗ್ರಹಿಸಿಟ್ಟಿದ್ದ ಹುಲ್ಲು ಸುಟ್ಟು ಹೋದ ಕಾರಣ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಒಟ್ಟು ಸುಮಾರು 40,000 ರಿಂದ 50,000ರವರೆಗೆ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಪ್ರತಿ ಹುಲ್ಲಿನ ರೋಲ್ಗೆ ಸುಮಾರು 200 ವೆಚ್ಚವಾಗುತ್ತದೆ ಎಂದು ರೈತರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಸಂಪೂರ್ಣವಾಗಿ ನಂದಿಸಿದರು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 